ಭೀಮಸೇನ ಜೋಶಿ ದೊಡ್ಡ ಕುಡುಕ : ಬಿಜೆಪಿ ಸದಸ್ಯ

ಬೆಂಗಳೂರು ಮಹಾನಗರ ಪಾಲಿಕೆ ಚಿಕ್ಕಪೇಟೆ ವಾರ್ಡ್ ನ ಬಿಜೆಪಿ ಜನಪ್ರತಿನಿಧಿ ಶಿವಕುಮಾರ್ ಅವರು, ಭೀಮಸೇನ ಜೋಶಿಯವರು ಬಹುದೊಡ್ಡ ಗಾಯಕರಾಗಿದ್ದರು. ಅವರು ಹಾಡಲು ವೇದಿಕೆ ಏರುವ ಮುನ್ನ ಮದ್ಯಪಾನ ಮಾಡುತ್ತಿದ್ದರು. ಮದ್ಯಪಾನ ಮಾಡದೆ ಅವರೂ ಎಂದೂ ಹಾಡುತ್ತಿರಲಿಲ್ಲ. ಈ ಸಂತಾಪ ಸೂಚಕ ಸಭೆಯಲ್ಲಿ ನಾವು "ಕುಡುಕರಿಗೂ ಗೌರವ ನೀಡಲೇಬೇಕು" ಎಂಬ ಅಸಂಬದ್ದ ಪದವನ್ನು ಬಳಸಿದರು.
ಶಿವಕುಮಾರ್ ಹೇಳಿಕೆಗೆ ಪಕ್ಷಾತೀತವಾಗಿ ಎಲ್ಲರೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಶಿವಕುಮಾರ್ ಅವರ ಮಾತಿನಿಂದ ಸಭೆಯಲ್ಲಿದ್ದ ಬಿಜೆಪಿಯ ಹಿರಿಯ ಸದಸ್ಯರು ತೀವ್ರ ಮುಜುಗರ ಅನುಭವಿಸಬೇಕಾಯಿತು. ಪ್ರತಿಪಕ್ಷ ಸದಸ್ಯರು, ಪ್ರಜ್ಞಾವಂತ, ಬುದ್ಧಿವಂತರ ಪಕ್ಷ ಎಂದು ಕರೆಸಿಕೊಳ್ಳುವ ನೀವು ಈ ನಾಡಿನ ಬಹುದೊಡ್ಡ ವಿದ್ವಾಂಸನಿಗೆ ಶ್ರದ್ಧಾಂಜಲಿ ಸಲ್ಲಿಸುವುದು ಇದೇ ರೀತಿಯೇ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ಇನ್ನೇನು ಗದ್ದಲ ಶುರುವಾಗುತ್ತದೆ ಅನ್ನುವಷ್ಟರಲ್ಲಿ ಮೇಯರ್ ನಟರಾಜ್ ಸಭೆಯನ್ನು ಮುಂದೂಡಿದರು.
ಸಭೆ ಮುಂದೂಡಿದ ನಂತರ ಮೇಯರ್ ಎಸ್ ಕೆ ನಟರಾಜ್ ಹಾಗೂ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ಅವರು ಶಿವಕುಮಾರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. 'ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದು ಗೊತ್ತಿಲ್ವಾ ನಿನಗೆ, ಮಾತನಾಡುವುದಕ್ಕಿಂತ ಸುಮ್ಮನೆ ಇದ್ದಿದ್ದರೆ ಪಕ್ಷದ ಗೌರವ ಉಳಿಯುತ್ತಿತ್ತು' ಎಂದು ಛೀಮಾರಿ ಹಾಕಿದ್ದಾರೆಂದು ತಿಳಿದು ಬಂದಿದೆ. ಶಿವಕುಮಾರ್ ಅವರು ಈ ರೀತಿ ಮಾತನಾಡಬಾರದಿತ್ತು. ನಾಳಿನ ಸಭೆಯಲ್ಲಿ ಅವರ ಮಾತುಗಳನ್ನು ಕಡತದಿಂದ ತೆಗೆದುಹಾಕಲಾಗುವುದು ಎಂದು ಮೇಯರ್ ಸ್ಪಷ್ಟನೆ ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications