ಚಿನ್ನಸ್ವಾಮಿ ಕ್ರೀಡಾಂಗಣ ಸರ್ವ ಸನ್ನದ್ಧ:ಕುಂಬ್ಳೆ
ಬೆಂಗಳೂರು, ಫೆ.1: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಪಂದ್ಯಕ್ಕೆ ಆತಿಥ್ಯ ವಹಿಸಲು ಸಜ್ಜಾಗಿದ್ದೇವೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಕ್ಕಿರುವ ಈ ಅವಕಾಶ ಅನಿರೀಕ್ಷಿತವಾದರೂ, ಕೆಎಸ್ ಸಿಎ ತ್ವರಿತವಾಗಿ ಎಲ್ಲಾ ಸೌಕರ್ಯಗಳನ್ನು ಒದಗಿಸಲು ಸರ್ವ ಸನ್ನದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧ್ಯಕ್ಷ ಅನಿಲ್ ಕುಂಬ್ಳೆ ಹೇಳಿದ್ದಾರೆ.
ನಿಗದಿತ ವೇಳಾಪಟ್ಟಿಯಂತೆ ಕೋಲ್ಕತ್ತದ ಈಡನ್ ಗಾರ್ಡನ್ಸ್ನಲ್ಲಿ ನಡೆಯಬೇಕಿದ್ದ ಪಂದ್ಯಕ್ಕೆ ಆತಿಥ್ಯ ವಹಿಸುವ ಅವಕಾಶ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಲಭಿಸಿದೆ. ಈ ಬಗ್ಗೆ ಐಸಿಸಿ ಅಧಿಕೃತವಾಗಿ ನೀಡಿರುವ ಆದೇಶ ಕೆಎಸ್ ಸಿಎ ತಲುಪಿದೆ. ಫೆ. 27 ರಂದು ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ಪಂದ್ಯ ನಡೆಯಲಿದೆ.
ಐಸಿಸಿ ಕ್ರಿಕೆಟ್ ವಿಶ್ವಕಪ್ 2011 ವೇಳಾಪಟ್ಟಿ
ಫೆ.13 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ಪಂದ್ಯ ನಡೆಯಲಿದೆ. ಆ ಪಂದ್ಯವನ್ನು ಮುಂದಿಟ್ಟುಕೊಂಡು ನಮ್ಮ ಸಿದ್ಧತೆಗಳು ನಡೆಯುತ್ತಿವೆ. ಆದ್ದರಿಂದ ಭಾರತ ಹಾಗೂ ಇಂಗ್ಲೆಂಡ್ ಪಂದ್ಯವನ್ನು ನಡೆಸಲು ಯಾವುದೇ ತೊಡಕಾಗದು. ಹೊಸ ಪ್ರೆಸ್ ಬಾಕ್ಸ್ ಒಳಗೊಂಡಂತೆ ಕ್ರೀಡಾಂಗಣದ ಕೆಲವು ಭಾಗಗಳಲ್ಲಿ ಸಣ್ಣಪುಟ್ಟ ನವೀಕರಣ ಕಾರ್ಯ ಕೆಲಸ ಭರದಿಂದ ಸಾಗಿದೆ ಎಂದು ಕುಂಬ್ಳೆ ಹೇಳಿದರು.
ಒಟ್ಟು ಐದು ಪಂದ್ಯ: ವಿಶ್ವಕಪ್ ಟೂರ್ನಿಯ ಐದು ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಇದಲ್ಲದೆ ಎರಡು ಅಭ್ಯಾಸ ಪಂದ್ಯಗಳಿಗೆ ಉದ್ಯಾನನಗರಿ ಮೈದಾನ ಒದಗಿಸಲಿದೆ. ಫೆ. 13 ರಂದು ನಡೆಯುವ ಅಭ್ಯಾಸ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಹಾಗೂ ಫೆ. 15 ರಂದು ನಡೆಯುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಹೋರಾಟ ನಡೆಸಲಿದೆ.
ಭಾರತದ ಎರಡು ಪಂದ್ಯಗಳನ್ನು ನೇರವಾಗಿ ವೀಕ್ಷಿಸುವ ಅವಕಾಶ ಬೆಂಗಳೂರಿನ ಜನತೆಗೆ ಲಭಿಸಿದೆ. ಮಾ. 6 ರಂದು ನಡೆಯುವ ಪಂದ್ಯದಲ್ಲಿ ಮಹೇಂದ್ರ ಸಿಂಗ್ ದೋನಿ ಬಳಗ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಇದಲ್ಲದೆ ಇಂಗ್ಲೆಂಡ್ ಹಾಗೂ ಐರ್ಲೆಂಡ್ (ಮಾ. 2), ಆಸ್ಟ್ರೇಲಿಯಾ ಹಾಗೂ ಕೀನ್ಯಾ (ಮಾ. 13), ಆಸ್ಟ್ರೇಲಿಯಾ ಹಾಗೂ ಕೆನಡಾ (ಮಾ. 16) ತಂಡಗಳು ಇಲ್ಲಿ ಪರಸ್ಪರ ಕಾದಾಡಲಿವೆ. [ಐಸಿಸಿ ವಿಶ್ವಕಪ್ 2011]
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications