ಶಿವಮೊಗ್ಗದಲ್ಲಿ ಫೆ.3ರಂದು ಮೈಲಾರಿ ಯಾತ್ರೆ

ಅಂದು ಬೆಳಿಗ್ಗೆ 10.30ಕ್ಕೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಮೈಲಾರಿ ಜಾತ್ರೆ ಹೊರಡಲಿದ್ದು, ವಿಜಯಯಾತ್ರೆಯನ್ನು ಚಿತ್ರದ ನಾಯಕ ನಟ ಶಿವರಾಜ್ಕುಮಾರ್, ಸಂಗೀತ ನಿರ್ದೇಶಕ ಗುರುಕಿರಣ್, ನಟಿ ಸಂಜನಾ ಸೇರಿದಂತೆ ಚಿತ್ರ ತಂಡದ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ಚಿತ್ರದ ನಿರ್ದೇಶಕ ಚಂದ್ರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೈಲಾರಿ ಚಿತ್ರ ರಾಜ್ಯಾದ್ಯಂತ ಒಟ್ಟು 129 ಚಿತ್ರಮಂದಿರಗಳಲ್ಲಿ ಬಿಡುಗಡೆ ಕಂಡಿದೆ. ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಶಿವಮೊಗ್ಗದಲ್ಲಿ ಚಿತ್ರ ಅತ್ಯಂತ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ ಎಂದು ಹರ್ಷವ್ಯಕ್ತಪಡಿಸಿದರಲ್ಲದೆ, ಇದಕ್ಕಾಗಿಯೇ ಶಿವಮೊಗ್ಗದಲ್ಲಿ ಮೈಲಾರಿಜಾತ್ರೆಯನ್ನು ನಡೆಸಲಾಗುತ್ತಿದೆ. ಜೊತೆಗೆ ಅಂದು ಮಧ್ಯಾಹ್ನ ಶಿಕಾರಿಪುರದಲ್ಲೂ ಮೈಲಾರಿ ಜಾತ್ರೆ ವಿಜಯಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಚಿತ್ರದ ನಿರ್ಮಾಪಕರನ್ನು ಕೆಚ್ಚೆದೆಯ ನಿರ್ಮಾಪಕ ಎಂದು ಕೊಂಡಾಡಿದ ಅವರು, ಮೈಲಾರಿ ಚಿತ್ರಕ್ಕೆ ಜನರಿಂದ ಇದೇ ರೀತಿ ಪ್ರೋತ್ಸಾಹ ಸಿಕ್ಕರೆ 200 ದಿನ ಪೂರೈಸುತ್ತದೆ. ಆ ಲಕ್ಷಣ ಗೋಚರಿಸುತ್ತಿದೆ ಎಂದು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಜೆಡಿಎಸ್ನ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ಛಾಯಾಗ್ರಾಹಕ ಚಂದ್ರಶೇಖರ್, ಸುದೀಂದ್ರ, ರಾಜೇಂದ್ರ ಉಪಸ್ಥಿತರಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications