ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆದರಿಕೆಗೆ ಹೆದರೋಲ್ಲ : ಶೋಭಾ ಕರಂದ್ಲಾಜೆ

By Mrutyunjaya Kalmat
|
Google Oneindia Kannada News

Shobha Karandlaje
ಬೆಂಗಳೂರು, ಫೆ. 1 : ಬೆದರಿಕೆ ಕರೆಗಳು ಬಂದಿರುವುದು ನಿಜ. ಇಂತಹ ಕರೆಗಳಿಗೆ ಹೆದರುವುದೂ ಇಲ್ಲ, ಬೆದರುವುದೂ ಇಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ದೂರು ದಾಖಲಿಸಲಾಗುವುದು ಎಂದು ಇಂಧನ ಸಚಿವ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಡುಗೆ ಅನಿಲ ವಿತರಣೆಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಸುಮಾರು 100 ರಿಂದ 150 ಕೋಟಿ ರುಪಾಯಿ ನಷ್ಟವುಂಟಾಗುತ್ತಿದೆ. ಇದನ್ನು ತಡೆಯುವುದೇ ನಮಗಿರುವ ಪ್ರಥಮ ಅದ್ಯತೆ. ಎಂತಹ ಶಕ್ತಿಗಳು ಎದುರಾದರೂ ಜಗ್ಗುವುದಿಲ್ಲ ಎಂದರು.

ಕಳೆದ ಕೆಲ ದಿನಗಳ ಹಿಂದೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಅಡುಗೆ ಅನಿಲ ಸರಬರಾಜು ವಿಷಯಕ್ಕೆ ಸಂಬಂಧಿಸಿದಂತೆ ನೀವು ತೆಗೆದುಕೊಳ್ಳುತ್ತಿರುವ ಕಠಿಣ ಕ್ರಮಗಳಿಂದ ನಮಗೆ ಭಾರಿ ನಷ್ಟ ಉಂಟಾಗುತ್ತದೆ. ಈ ವಿಷಯವನ್ನು ಕೂಡಲೇ ಕೈಬಿಡದಿದ್ದರೆ ಮಹಾರಾಷ್ಟ್ರದ ಹೆಚ್ಚುವರಿ ಜಿಲ್ಲಾಧಿಕಾರಿ ಸೋನವಾನೆ ಅವರಿಗೆ ಆದ ಗತಿ ನಿಮಗೂ ಆಗುತ್ತದೆ ಎಂದು ಬೆದರಿಕೆ ಹಾಕಿದ. ಅದಕ್ಕೆ ನಾನು ಸರಿಯಪ್ಪ ಹಾಗೆ ಮಾಡು ಎಂದು ಹೇಳಿದೆ ಎಂದು ಶೋಭಾ ಕರಂದ್ಲಾಜೆ ವಿವರಿಸಿದರು.

ಕೆಲವಾರು ವರ್ಷಗಳಿಂದ ಅಡುಗೆ ಅನಿಲ ವಿತರಣೆಯಲ್ಲಿ ಭಾರಿ ಅವ್ಯವಹಾರ ನಡೆದುಕೊಂಡು ಬಂದಿದೆ. ಇದೊಂದು ದೊಡ್ಡ ಮಾಫಿಯಾ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದೆ. ಅಡುಗೆ ಅನಿಲವನ್ನು ವಾಣಿಜ್ಯ ಬಳಕೆಗಾಗಿ ದುಪ್ಪಟ್ಟು ದರಕ್ಕೆ ಮಾರಾಟ ಮಾಡಲಾಗುತ್ತದೆ. ಶೇ. 40 ರಿಂದ 50 ರಷ್ಟು ಅನಿಲ ವಾಣಿಜ್ಯ ಬಳಕೆಗೆ ಮಾರಾಟವಾಗುತ್ತಿದೆ. ಈ ಬಗ್ಗೆ ಸಾರ್ವಜನಕರಿಂದ ಮತ್ತು ಸಂಘ ಸಂಸ್ಥೆಗಳಿಂದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಗೆ ನೂರಾರು ದೂರುಗಳು ಬಂದಿವೆ ಎಂದು ಶೋಭಾ ಹೇಳಿದರು.

ಇಂತಹ ಬೆದರಿಕೆ ಕರೆಗೆ ಹೆದರುವುದಿಲ್ಲ. ಈ ಅವ್ಯವಹಾರವನ್ನು ತಡೆಗಟ್ಟಲು ಕೈಕೊಳ್ಳಬೇಕಾದ ಕ್ರಮಗಳನ್ನು ಸರಕಾರ ತೆಗೆದುಕೊಳ್ಳತ್ತದೆ. ಇದರಲ್ಲಿ ಅನುಮಾನವೇ ಬೇಡ. ಬೆದರಿಕೆಗೆ ಕರೆ ಬಗ್ಗೆ ಮುಖ್ಯನಮಂತ್ರಿಗಳೊಂದಿಗೆ ಚರ್ಚಿಸಿ ದೂರು ದಾಖಲಿಸಲಾಗುವುದು ಎಂದು ಕರಂದ್ಲಾಜೆ ತಿಳಿಸಿದರು.

English summary
Threat call about gas distribution, Energy Minister Shobha has said we don't care such type of threat call, will discuss with Chief Minister BS Yeddyurappa over threat call after filing a complaint against them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X