ಫೆ. 24 ರಂದು ರಾಜ್ಯ ಬಜೆಟ್ ಮಂಡನೆ : ಆಚಾರ್ಯ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಕೇಂದ್ರ ಬಜೆಟ್ ಮಂಡನೆಯಾದ ನಂತರವೇ ರಾಜ್ಯ ಬಜೆಟ್ ಮಂಡನೆಯಾಗುತ್ತಿತ್ತು. ಆದರೆ, ಈ ವರ್ಷ ಕೇಂದ್ರ ಬಜೆಟ್ ಗೂ ಮುನ್ನ ರಾಜ್ಯ ಬಜೆಟ್ ಮಂಡಿಸಲು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.
ಪಂಪ್ ಸೆಟ್ ಸಕ್ರಮ : ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ 10 ಸಾವಿರ ಮತ್ತು ಎರಡು ತಿಂಗಳ ಠೇವಣಿ ಮೊತ್ತ ವಸೂಲು ಮಾಡಲು ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಲು 70 ಸಾವಿರ ರುಪಾಯಿ ವೆಚ್ಚ ತಗಲುತ್ತದೆ. ಇದರಲ್ಲಿ 10 ಸಾವಿರ ರೈತರಿಂದ ವಸೂಲು ಮಾಡಿದರೆ, 25 ಸಾವಿರ ರಾಜ್ಯ ಸರಕಾರ ಮತ್ತು 30 ಸಾವಿರ ಆಯಾ ವಿದ್ಯುತ್ ಸರಬರಾಜು ಕಂಪನಿಗಳು ಭರಿಸುತ್ತವೆ ಎಂದು ಆಚಾರ್ಯ ವಿವರಿಸಿದರು.












Click it and Unblock the Notifications