ಸಕ್ರೆಬೈಲು ಹೆಣ್ಣಾನೆಯ ಮೇಲೆ ಕಾಡಾನೆಗಳ ದಾಳಿ

ಬಿಡಾರದ 75 ವರ್ಷದ ಹಿರಿಯ ಹೆಣ್ಣಾನೆ ಕಾವೇರಿಯನ್ನು ಎಂದಿನಂತೆ ಕಾಡಿನೊಳಗೆ ಮೇಯಲು ಬಿಡಲಾಗಿತ್ತು. ನಿನ್ನೆ ಬೆಳಿಗ್ಗೆ ಆನೆಯನ್ನು ಬಿಡಾರಕ್ಕೆ ಕರೆತರಲು ಮಾವುತರು ಸಕ್ರೆಬೈಲು ಅರಣ್ಯಕ್ಕೆ ಹೋಗಿದ್ದಾರೆ. ಆದರೆ ಅಲ್ಲಿ ಕಾವೇರಿ ಆನೆಯ ದೇಹದ ಮೇಲೆ ರಕ್ತದ ಗಾಯಗಳಾಗಿ, ತೀವ್ರ ನಿತ್ರಾಣಗೊಂಡಿತ್ತು. ಕಾಡಿನಲ್ಲಿಯೇ ಬಿದ್ದು ನರಳಾಡ ತೊಡಗಿತ್ತು.
ತಕ್ಷಣವೇ ಮಾವುತರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ವೈದ್ಯರೊಂದಿಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ, ಕಾವೇರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಪರಿಶೀಲಿಸಿದಾಗ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಸೇರಿದ ಸುಮಾರು 3ಕ್ಕೂ ಅಧಿಕ ಗಂಡು ಕಾಡಾನೆಗಳು ಕಾವೇರಿಯನ್ನು ದಂತದಿಂದ ತಿವಿದಿರುವುದು ಪತ್ತೆಯಾಗಿತ್ತು. ಸುಮಾರು 15ಕ್ಕೂ ಹೆಚ್ಚು ತಿವಿತದ ಗಾಯಗಳು ಕಾವೇರಿಯ ದೇಹದ ಮೇಲೆ ಪತ್ತೆಯಾಗಿದ್ದವು.
ಕಾಡಾನೆಗಳ ತಿವಿತದಿಂದ ಕಾವೇರಿಯ ಕುತ್ತಿಗೆ ಭಾಗದಲ್ಲಿ ತೀವ್ರ ಸ್ವರೂಪದ ಗಾಯವಾಗಿದೆ. ಇದರಿಂದ ಕಾವೇರಿಯ ಉಸಿರಾಟಕ್ಕೆ ತೊಂದರೆಯಾಗಿದೆ. ನಿನ್ನೆ ಹೊರಗಿನಿಂದ ಉಸಿರಾಡುವ ವ್ಯವಸ್ಥೆಯನ್ನು ಅರಣ್ಯ ಇಲಾಖೆ ವೈದ್ಯರು ಮಾಡಿದ್ದರು. ಇಂದು ಪಶುವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರಾದ ಡಾ.ಸುರೇಶ್ ನೇತೃತ್ವದ ವೈದ್ಯರ ತಂಡ ಕಾವೇರಿಯ ವೈದ್ಯೋಪಚಾರ ಮಾಡುತ್ತಿದ್ದಾರೆ. ಪ್ರಸ್ತುತ ಕಾವೇರಿಯ ಸ್ಥಿತಿ ಚಿಂತಾಜನಕವಾಗಿದೆ.
ವಲಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ಕುಮಾರ್ ಹಾಗೂ ಡಿಎಫ್ಓ ರವಿಕುಮಾರ್ರವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಆನೆಗಳಿಗೆ ಚಿಕಿತ್ಸೆ ನೀಡುವ ಯಾವುದೇ ವ್ಯವಸ್ಥೆಯಿಲ್ಲ. ಈ ಹಿಂದೆಯೂ ಅನೇಕ ಹೆಣ್ಣಾನೆಗಳ ಮೇಲೆ ಕಾಡಾನೆಗಳು ದಾಳಿ ಮಾಡಿದ ಊದಾಹರಣೆಗಳಿವೆ. ಸಕ್ರೆಬೈಲು ಆನೆ ಬಿಡಾರದಲ್ಲಿನ ಆನೆಯೊಂದರ ಮೇಲೆ ಕಾಡಾನೆಗಳು ಈ ರೀತಿ ದಾಳಿ ಮಾಡಿರುವುದು ಇದೇ ಪ್ರಥಮ ಬಾರಿಯಾಗಿದೆ ಎಂದರು. ಇಂದಿನಿಂದ ಕಾವೇರಿ ಆನೆ ಅಲ್ಪ ಆಹಾರ ಸೇವಿಸಿದೆ. ಜೊತೆಗೆ ನೀರು ಕೂಡ ಕುಡಿದಿದೆ. ಕ್ರಮೇಣ ಚೇತರಿಸಿಕೊಳ್ಳುತ್ತಿದ್ದು, ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಸ್ಪಂದಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications