ಆಸ್ತಿ ವಿವರ ಘೋಷಿಸ್ತಾರಂತೆ ಯಡಿಯೂರಪ್ಪ!

ಭಾನುವಾರ (ಫೆ. 6) ತಮ್ಮ ಆಸ್ತಿ ವಿವರ ಘೋಷಿಸುವುದಾಗಿ ಯಡಿಯೂರಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ. ಅಕ್ರಮ ಆಸ್ತಿ ಮಾಡಿದ್ದಾರೆಂದು ಜೆಡಿಎಸ್ ನಾಯಕರು ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಆಸ್ತಿ ಘೋಷಿಸುವುದಾಗಿ ಯಡಿಯೂರಪ್ಪ ಹೇಳಿದರು. ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಅಣತಿಯಂತೆ ನಡೆದುಕೊಳ್ಳುತ್ತಿರುವುದಾಗಿ ಅವರು ತಿಳಿಸಿದರು. ಫೆ.24ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನದ ತಯಾರಿಯನ್ನು ವೀಕ್ಷಿಸಲು ಮತ್ತು ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಬೆಳಗಾವಿಗೆ ಯಡಿಯೂರಪ್ಪ ತೆರಳಿದ್ದರು.
"ಭ್ರಷ್ಟ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಸ್ತಿ ಬರೋಬ್ಬರಿ 1000 ಕೋಟಿ ರು." ಎಂದು ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಇತ್ತೀಚೆಗೆ ಹೊಸ ಬಾಂಬ್ ಸಿಡಿಸಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಹಿರಂಗಪಡಿಸಬಹುದಾದ ತಮ್ಮ ಆಸ್ತಿಯ ಪ್ರಮಾಣ ಎಷ್ಟು ಎಂಬ ಕುತೂಹಲ ಎಲ್ಲರ ಮನದಲ್ಲೂ ಮೂಡಿದೆ. ಇತ್ತೀಚೆಗೆ ರಿಡಿಫ್ ಅಂತರ್ಜಾಲ ತಾಣ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಶ್ರೀಮಂತ ಮುಖ್ಯಮಂತ್ರಿಗಳಲ್ಲಿ ಯಡಿಯೂರಪ್ಪ ನಾಲ್ಕನೇ ಸ್ಥಾನ ಪಡೆದಿದ್ದರು. ಅದರಲ್ಲಿ ಅವರ ಆಸ್ತಿ 5.38 ಕೋಟಿ ರು. ಮಾತ್ರ ಎಂದು ನಮೂದಿಸಲಾಗಿದೆ!
ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ವೈಯಕ್ತಿಕ ಆಸ್ತಿ ವಿವರ ಬಹಿರಂಗಪಡಿಸಬೇಕೆಂದು ಪಕ್ಷದ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಸೂಚಿದ್ದರು ಎಂಬುದು ಗಮನಾರ್ಹ. ಆಸ್ತಿ ವಿವರ ಘೋಷಿಸುವ ಯಡಿಯೂರಪ್ಪನವರ ಈ ಘೋಷಣೆಯಂತೂ ಕರ್ನಾಟಕದ ರಾಜಕೀಯ ವಲಯದಲ್ಲಿ ಸಣ್ಣ ಅಲೆಗಳನ್ನು ಎಬ್ಬಿಸಿರುವುದಂತೂ ಸತ್ಯ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications