ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿ: ದಂಪತಿಗಳು ಸಾವು

ಸೋಮವಾರಪೇಟೆ ಬಸವೇಶ್ವರ ರಸ್ತೆಯ ನಿವಾಸಿ, ಖಾಸಗಿ ಬಸ್ವೊಂದರ ಮಾಲೀಕ ಮಹೇಶ್ ಹಾಗೂ ಪತ್ನಿ ಶೀಲಾ ಎಂಬುವರೇ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದು, ಗಾಯಗೊಂಡ ಮನಶ್ರೀ ಹಾಗೂ ಪುನಿತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ: ಮಹೇಶ್ ಹಾಗೂ ಶೀಲಾ ದಂಪತಿಗಳು ತಮ್ಮ ಹಿರಿಯ ಪುತ್ರಿ ಪೂನಂಗೆ ವಿವಾಹ ನಿಶ್ಚಯವಾಗಿರುವ ಹಿನ್ನಲೆಯಲ್ಲಿ ಆಕೆಯ ವಿವಾಹಕ್ಕೆ ಬೇಕಾದ ಬಟ್ಟೆ ಇನ್ನಿತರ ಪದಾರ್ಥಗಳನ್ನು ಖರೀದಿಸಲೆಂದು ನಿನ್ನೆ ತಮ್ಮ ಮಾರುತಿ ಓಮ್ನಿ(ಕೆಎ 12ಎನ್ 9076)ಯಲ್ಲಿ ಪುತ್ರ ಪುನೀತ್ ಹಾಗೂ ಪುತ್ರಿ ಮನಶ್ರೀಯೊಂದಿಗೆ ಬೆಂಗಳೂರಿಗೆ ತೆರಳಿದ್ದು, ಅಲ್ಲಿ ತಮಗೆ ಬೇಕಾದ ಬಟ್ಟೆ ಮತ್ತಿತರ ಪದಾರ್ಥಗಳನ್ನು ಖರೀದಿಸಿ ಮುಂಜಾನೆ ಮನೆಗೆ ಹಿಂತಿರುಗುತ್ತಿದ್ದರು.
ಈ ಸಂದರ್ಭ ಕುಶಾಲನಗರದ ಕೊಪ್ಪದ ಬಳಿ ದಟ್ಟ ಮಂಜು ಕವಿದಿದ್ದ ಹಿನ್ನಲೆಯಲ್ಲಿ ರಸ್ತೆ ಸರಿಯಾಗಿ ಕಾಣದೆ ಅಲ್ಲಿನ ಗ್ಯಾರೇಜ್ ಬಳಿ ನಿಂತಿದ್ದ ಲಾರಿಗೆ ಮಹೇಶ್ ಅವರು ಚಾಲಿಸುತ್ತಿದ್ದ ಮಾರುತಿ ಓಮ್ನಿ ಡಿಕ್ಕಿ ಹೊಡೆದಿದೆ. ಪರಿಣಾಮ ಮಹೇಶ್ ಹಾಗೂ ಶೀಲಾ ಅವರುಗಳು ಗಂಭೀರ ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಕುಶಾಲನಗರ ಆಸ್ಪತ್ರೆಗೆ ಅವರನ್ನು ಕರೆದೊಯ್ದಿದ್ದಾರೆ.
ಆದರೆ ಆಸ್ಪತ್ರೆ ತಲುಪುವ ಮುನ್ನವೇ ಮಹೇಶ್ ಮೃತಪಟ್ಟಿದ್ದಾರೆ. ಶೀಲಾ ಅವರಿಗೆ ಕುಶಾಲನಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿಗೆ ಕರೆದೊಯ್ಯಲಾಯಿತಾದರೂ ಅವರು ಕೂಡ ಮಾರ್ಗದ ನಡುವೆ ಸಾವನ್ನಪ್ಪಿದ್ದಾರೆ.
ಗಾಯಗೊಂಡ ಮಕ್ಕಳಾದ ಮನಶ್ರೀ ಹಾಗೂ ಪುನಿತ್ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಶವವನ್ನು ನೀಡಲಾಗಿದೆ. ಬೈಲುಕುಪ್ಪೆ ಪೊಲೀಸ್ ಠಾಣೆಯ ಎಸ್ಐ ಎಂ.ಸಿ.ನಾಗೇಗೌಡ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications