ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಜೊತೆ ಚಿರು ಪ್ರಜಾರಾಜ್ಯಂ ವಿಲೀನ

By Mahesh
|
Google Oneindia Kannada News

Congress PRP Merge
ಹೈದರಾಬಾದ್, ಫೆ.7: ಸಾಮಾಜಿಕ ನ್ಯಾಯದ ಉದ್ದೇಶ ಈಡೇರಿಕೆಗೆ ಕಾಂಗ್ರೆಸ್ ಜೊತೆಗೂಡಿ ಕಾರ್ಯನಿರ್ವಹಿಸಲು ಸಿದ್ಧ. ಬಡತನ ನಿವಾರಣೆಗೆ ಶ್ರಮಿಸುವುದು ನಮ್ಮ ಮುಖ್ಯ ಉದ್ದೇಶ ಎಂದು ಪ್ರಜಾರಾಜ್ಯಂ ಪಕ್ಷದ ಅಧ್ಯಕ್ಷ ಕೆ.ಚಿರಂಜೀವಿ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಡನೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಇದು ಆಂಧ್ರದಲ್ಲಿ ಜಗನ್ ಪ್ರಭಾವ ಕಮ್ಮಿ ಮಾಡಲು ತೆಗೆದುಕೊಂಡ ನಿರ್ಧಾರವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಆಂಧ್ರ ರಾಷ್ಟ್ರದ ಉದ್ಧಾರಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಯಾವುದೇ ವೈಯಕ್ತಿಕ ಸ್ಪರ್ಧೆ ಇಲ್ಲಿಲ್ಲ. ಆಂಧ್ರ ಸಚಿವ ಸಂಪುಟ ಸೇರುವ ಬಯಕೆ ನನಗಿಲ್ಲ ಎಂದರು.

ಆಂಧ್ರ ಉಸ್ತುವಾರಿ ವಹಿಸಿಕೊಂಡಿರುವ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಮಾತನಾಡಿ, ಆಂಧ್ರದಲ್ಲಿ ರೈತರಿಗೆ ನ್ಯಾಯ ದೊರಕಿಸಿ ಕೊಡಲು ಪ್ರಜಾರಾಜ್ಯಂ ಜೊತೆ ಕಾಂಗ್ರೆಸ್ ಕೈಜೋಡಿಸಿ, ಬಡವರ ಕಣ್ಣೀರು ಒರೆಸುವುದು ನಮ್ಮ ಉದ್ದೇಶ ಎಂದರು.

ಕೇವಲ ಪ್ರಜಾರಾಜ್ಯಂ ಪಕ್ಷವೊಂದರಿಂದಲೇ ಹಿಂದುಳಿದವರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಒದಗಿಸಿಕೊಡಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿದ್ದೇವೆ. ಆದ್ದರಿಂದ ಕಾಂಗ್ರೆಸ್ ಜೊತೆ ಕೈಜೋಡಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ರಾಜಕೀಯ ವ್ಯವಹಾರ ಸಮಿತಿ ಸದಸ್ಯ ಸಿ.ರಾಮಚಂದ್ರಯ್ಯ ನಂತರ ವಿವರಿಸಿದರು.

English summary
Telegu cine actor and PRP chief Chiranjeevi confirmed that Congress and Praja Rajyam Party (PRP) merged. He announced this after meeting with Congress president Sonia Gandhi in New Delhi on Feb 6. PRP chief Chiranjeevi also informed that he will not join the state Cabinet
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X