ಒಂದು ಫೋನ್ ಕರೆಗೆ ದ.ಕ ಕ್ರೈಂ ಸುದ್ದಿ ಲಭ್ಯ

ಈ ಕಂಟ್ರೋಲ್ ರೂಮನ್ನು ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಅವರು ಉದ್ಘಾಟಿಸಿದ ನಂತರ ಜಿಲ್ಲಾ ಎಸ್.ಪಿ. ಸುಬ್ರಮಣ್ಯೇಶ್ವರ್ ರಾವ್ ಕಂಟ್ರೋಲ್ ರೂಮಿನ ಬಗ್ಗೆ ಮಾಹಿತಿ ನೀಡಿದರು. ಈ ಯೋಜನೆ ದ.ಕ. ಜಿಲ್ಲೆಯಲ್ಲೇ ಪ್ರಥಮವಾಗಿದೆ. ಇದುವರೆಗೆ ಯಾವುದೇ ಘಟನೆಗಳು ನಡೆದ ಹಲವಾರು ಗಂಟೆಗಳ ಬಳಿಕ ಸಾರ್ವ ಜನಿಕರಿಗೆ ಮತ್ತು ಮಾಧ್ಯಮಗಳಿಗೆ ಮಾಹಿತಿ ನೀಡಲಾಗುತ್ತಿತ್ತು. ಆದರೆ ಇನ್ನು ಮುಂದಕ್ಕೆ ತಕ್ಷಣವೇ ಮಾಹಿತಿ ನೀಡಲಾಗುತ್ತದೆ ಎಂದರು. ದಕ್ಷಿಣ ಕನ್ನಡ ಪೊಲೀಸರು ಪ್ರತ್ಯೇಕ ವೆಬ್ ಸೈಟ್ ಕೂಡಾ ಹೊಂದಿದ್ದು, ಅದರಲ್ಲೂ ಪ್ರತಿನಿತ್ಯ ದಾಖಲಾದ ದೂರಿನ ವಿವರಗಳು ಲಭ್ಯವಿರುತ್ತದೆ.
ಅಲ್ಲದೆ ಪೊಲೀಸ್ ಅಧಿಕಾರಿಗಳ ಸಂಪರ್ಕ ಸಂಖ್ಯೆಯನ್ನೂ ಕಂಟ್ರೋಲ್ ರೂಮಿನಲ್ಲಿ ನೀಡಲಾಗುತ್ತಿದ್ದು ಈ ಕೆಲಸವನ್ನು ಎಸ್.ಐ.ಯವರು ನಿರ್ವಹಿಸಲಿದ್ದಾರೆ. ಇದಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಂಟ್ರೋಲ್ ರೂಮಿನ ಸಂಖ್ಯೆ (0824)242 404 ಮತ್ತು ಮೊಬೈಲ್ ಸಂಖ್ಯೆ 94808 05300 ಆಗಿರುತ್ತದೆ ಈ ಕೇಂದ್ರ ದಿನದ ಇಪ್ಪತ್ತನಾಲ್ಕು ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿದೆ ಎಂದರು.
ಅಮಿತ್ ಸಿಂಗ್ ಪ್ರಕರಣ : ಇತ್ತೀಚೆಗೆ ಬಂಟ್ವಾಳ ಠಾಣೆಯಲ್ಲಿ ಎಎಸ್ಪಿ ಅಮಿತ್ ಸಿಂಗ್ ಪ್ರಕರಣವನ್ನು ಪ್ರಸ್ತಾಪಿಸಿದ ಎಸ್.ಪಿ. ಸುಬ್ರಹ್ಮಣ್ಯೇಶ್ವರ್ ರಾವ್ ಪ್ರಕರಣವೊಂದಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಅವರ ವಿಚಾರಣೆ ಮುಗಿಯುವ ಮೊದಲೇ ಬಿ.ಜೆ.ಪಿ. ಮುಖಂಡರೋರ್ವರು ಠಾಣೆಗೆ ಬಂದು ನೇರವಾಗಿ ಆರೋಪಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರೋಪಿ ರೌಡಿ ಶೀಟರ್ ಆಗಿದ್ದು, ವಿಚಾರಣೆ ಮುಗಿಯದೆ ಹೊರಗಿನವರೊಂದಿಗೆ ಮಾತನಾಡಲು ಠಾಣಾಧಿಕಾರಿ ಅನುಮತಿ ನೀಡಿದ್ದರೆ ಅದು ಪೊಲೀಸ್ ವೈಫಲ್ಯವೇ ಸರಿ.
ಬಂಟ್ವಾಳ ಪೊಲೀಸರೇ ಸರಿಯಾಗಿ ವಿಚಾರಣೆ ನಡೆಸಿದ್ದರೆ ಪ್ರಕರಣದಲ್ಲಿ ಎಎಸ್ಪಿ ಅವರು ಮಧ್ಯೆ ಪ್ರವೇಶಿಸುವ ಪ್ರಮೇಯವೇ ಬರುತ್ತಿರಲಿಲ್ಲ. ಎಎಸ್ಪಿ ವಿರುದ್ಧ ಪ್ರತಿಭಟನೆ ನಡೆದ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ದಾಖಲಾದರೆ ಅಗತ್ಯವಾದ ಕಾನೂನು ಕ್ರಮ ಜಾರಿಗೊಳಿಸಬಹುದು ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications