ಶಿವಮೊಗ್ಗದಲ್ಲಿ ಶಿಕ್ಷಕನಿಂದ ಲೈಂಗಿಕ ಕಿರುಕುಳ

ಶಿಕ್ಷಕನ ಕಾಮದಾಟದ ವಿಷಯ ತಿಳಿದು ರೊಚ್ಚಿಗೆದ್ದ ಪೋಷಕ ಸಮೂಹ, ಇಂದು ಬೆಳಿಗ್ಗೆ ಕಾಮುಕ ದೈಹಿಕ ಶಿಕ್ಷಕನಿಗೆ ತಕ್ಕ ಪಾಠ ಕಲಿಸಲು ಶಾಲೆಗೆ ಆಗಮಿಸಿದ್ದರು. ಆದರೆ ಪೋಷಕರ ಆಗಮನದ ವಿಷಯ ತಿಳಿದ ಶಾಲೆಯ ದೈಹಿಕ ಶಿಕ್ಷಕ ಶಾಲೆಗೆ ಆಗಮಿಸದೆ, ಪರಾರಿಯಾಗಿದ್ದ.
ಆಕ್ರೋಶ ಭರಿತ ಪೋಷಕರು ಶಾಲೆಯ ಮುಖ್ಯಸ್ಥರನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಹರಿಹಾಯ್ದರು. ಸ್ಥಳದಲ್ಲಿ ಕೆಲ ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಆಕ್ರೋಶಭರಿತ ಪೋಷಕರನ್ನು ಸಮಾಧಾನಪಡಿಸಿದರು.
ಲೈಂಗಿಕ ಕಿರುಕುಳ : 1ರಿಂದ 7ನೇ ತರಗತಿಯವರಿಗೆ ಮಕ್ಕಳು ಈ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಕಳೆದೊಂದು ವರ್ಷದಿಂದ ಇಲ್ಲಿ ಕೆಲಸ ಮಾಡುತ್ತಿದ್ದ ದೈಹಿಕ ಶಿಕ್ಷಕ ವಿದ್ಯಾರ್ಥಿಗಳನ್ನು ಶಾಲೆಯಲ್ಲಿಯೇ ತನ್ನ ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದ ಎನ್ನಲಾಗಿದೆ.
ಜೊತೆಗೆ ರಜಾ ದಿನಗಳಂದು ವಿದ್ಯಾರ್ಥಿಗಳನ್ನು ಪುಸಲಾಯಿಸಿ, ತನ್ನ ಮನೆಗೆ ಕರೆಯಿಸಿಕೊಂಡು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಈ ವಿಷಯ ಯಾರಿಗೂ ಹೇಳದಂತೆ ಮಕ್ಕಳಿಗೆ ಬೆದರಿಕೆ ಹಾಕುತ್ತಿದ್ದ ಎಂದು ಪೋಷಕರು ದೂರಿದ್ದಾರೆ.
ಕಳೆದೆರೆಡು ದಿನಗಳ ಹಿಂದೆ ಕೆಲ ವಿದ್ಯಾರ್ಥಿಗಳ ದೈಹಿಕ ಶಿಕ್ಷಕನ ಕಾಮದಾಟದ ಬಗ್ಗೆ ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದರು. ಶಿಕ್ಷಕನಿಗೆ ತಕ್ಕ ಪಾಠ ಕಲಿಸಲು ಇಂದು ಪೋಷಕರ ಸಮೂಹ ಶಾಲೆಗೆ ಆಗಮಿಸಿತ್ತು. ಮೊದಲೇ ಈ ವಿಷಯ ತಿಳಿದಿದ್ದ ಶಿಕ್ಷಕ ಶಾಲೆಗೆ ಆಗಮಿಸದೆ ಪರಾರಿಯಾಗಿದ್ದಾನೆ. ಈ ಸಂಬಂಧ ಈ ಶಿಕ್ಷಕನ ವಿರುದ್ದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications