ಸವಣೂರಲ್ಲಿ ಅಪರೂಪದ ಮಹಿಳಾ ರಥೋತ್ಸವ

ಸ್ತ್ರೀ ಸಮಾನತೆಯ ಆಶಯಗಳನ್ನು ಸಮರ್ಥವಾಗಿ ಪ್ರತಿಬಿಂಬಿಸುವ ಈ ಮಹಿಳಾ ರಥೋತ್ಸವದಲ್ಲಿ ಕೇವಲ ಮಹಿಳೆಯರೇ ಪಾರ್ವತಿ ದೇವಿಯ ಬೃಹತ್ ತೇರನ್ನು ಎಳೆಯುವ ಸಾರಥ್ಯ ವಹಿಸುತ್ತಿದ್ದು, ಮಂತ್ರವಾಡಿಯ ಯೋಗಿಗಳಾಗಿದ್ದ ಲಿಂ. ಕೆಂಜಡೇಶ್ವರ ಶಿವಾಚಾರ್ಯರ ಕಾಲದಿಂದ ಈ ನಿಯಮವನ್ನು ಪ್ರತಿ ವರ್ಷವೂ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ರಾಜ್ಯದಲ್ಲಿಯೇ ಅತ್ಯಂತ ಅಪರೂಪದ ಈ ರಥೋತ್ಸವ ಈ ವರ್ಷವೂ ನಿವಿಘ್ನವಾಗಿ ನೆರವೇರಿತು.
ಸುಕ್ಷೇತ್ರವಾದ ಮಂತ್ರವಾಡಿಯ ಶ್ರೀ ರೇವಣಸ್ದಿದೇಶ್ವರ ಬೆಟ್ಟದ ತುದಿಯಿಂದ ಕೆಳಗಿರುವ ಪಾದಗಟ್ಟಿಯವರೆಗೆ ಬಳಿಕ ಪುನಃ ಪಾದಗಟ್ಟಿಯಿಂದ ಬೆಟ್ಟದ ತುದಿಯವರೆಗೆ ಪಾರ್ವತಿ ದೇವಿಯ ಅಲಂಕೃತ ತೇರನ್ನು ಎಳೆಯುವ ನೂರಾರು ಮಹಿಳೆಯರು, ನಿರಂತರವಾದ ಜಯಕಾರಗಳೊಂದಿಗೆ ಸಂಭ್ರಮಿಸಿದರು.
ಬೆಂಗಳೂರು ಸಮ್ಮೇಳನದಲ್ಲಿ ಮಹಿಳೆಯರ ದರ್ಬಾರು
ಧ್ವಜ, ತಳಿರು ತೋರಣ, ಹೂಗಳಿಂದ ಅಲಂಕೃತವಾಗಿದ್ದ ಪಾರ್ವತಿ ದೇವಿಯ ರಥೋತ್ಸವವನ್ನು ಈ ವರ್ಷವೂ ವೈಭವಪೂರ್ಣವಾದ ಕೈಗೊಳ್ಳಲಾಗಿದ್ದು, ಇದಕ್ಕೂ ಮೊದಲ ದಿವಸ ಸಂಜೆ ಶ್ರೀ ರೇವಣ ಸಿದ್ದೇಶ್ವರರ ರಥೋತ್ಸವ ಕೈಗೊಳ್ಳಲಾಗುತ್ತದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ರೇವಣಸಿದ್ದೇಶ್ವರ ಹಾಗೂ ಲಿಂ. ಕೆಂಜಡೇಶ್ವರ ಕತೃ ಗದ್ದುಗೆಗೆ ರುದ್ರಾಭಿಷೇಕ, ಪುಣ್ಯಾರಾಧನೆ, ಅನ್ನದಾಸೋಹ, ಶ್ರೀ ರೇವಣಸಿದ್ದೇಶ್ವರರ ಉತ್ಸವಮೂರ್ತಿ ಹಾಗೂ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯರ ಪಲ್ಲಕ್ಕಿ ಉತ್ಸವ, ಗುಗ್ಗಳ ಸೇವೆ, ಶಿವಾನುಭವಗೋಷ್ಠಿ, ಉಪನ್ಯಾಸ, ಕೀರ್ತನೆ ಮೊದಲಾದ ಕಾರ್ಯಕ್ರಮಗಳು ಜರುಗಿದವು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications