ಬೆಂಗಳೂರು ಸಂಚಾರ ಪೊಲೀಸರಿಗೆ ಬಿ-ಟ್ರ್ಯಾಕ್ ನಲ್ಲಿ ಚಿನ್ನ

ಇ-ಆಡಳಿತದಲ್ಲಿನ ಸಾಧನೆಗಾಗಿ ಕೇಂದ್ರ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಕುಂದುಕೊರತೆ ಇಲಾಖೆ ನೀಡುವ ಈ ಪ್ರಶಸ್ತಿಯು ಇಡೀ ದೇಶದಲ್ಲಿ ಮೊದಲ ಬಾರಿಗೆ ನಮಗೆ ಸಂದಿದೆ ಎಂದು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಮಂಗಳವಾರ ತಿಳಿಸಿದರು.
ನಗರದಲ್ಲಿ ಜನಸಂಖ್ಯೆ ಮತ್ತು ವಾಹನ ಭರಾಟೆ ಒಂದೇ ಸಮನೆ ಏರುತ್ತಿದೆ. ಇದರ ಜತೆಗೆ ಮೆಟ್ರೊ, ಫ್ಲೈ ಓವರ್, ಅಂಡರ್ಪಾಸ್ ಮತ್ತು ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿಗಳು ಬೃಹತ್ ಪ್ರಮಾಣದಲ್ಲಿ ನಡೆಯುತ್ತಿವೆ. ಇವುಗಳ ನಡುವೆಯೂ ಸುಗಮ ಸಂಚಾರ ಕಾಪಾಡುವುದು ಸಂಚಾರಿ ಪೊಲೀಸರಿಗೆ ಸವಾಲಿನದ್ದೇ ಆಗಿದೆ. ಅಂತಹುದರಲ್ಲಿ ಸುಗಮ, ಸುರಕ್ಷಿತ ಸಂಚಾರ ಕಾಯ್ದುಕೊಳ್ಳುವಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಚಿನ್ನದ ಗರಿಗೆ ಭಾಜನರಾಗಿದ್ದಾರೆ ಎಂದು ಬಿದರಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ 40 ಲಕ್ಷ ವಾಹನಗಳು ಓಡಾಡುತ್ತಿವೆ. ಇದರಲ್ಲಿ ನಗರವು ದೆಹಲಿ ಬಳಿಕ ಎರಡನೇ ಸ್ಥಾನದಲ್ಲಿದೆ. ಆದಾಗ್ಯೂ, 2007ರಲ್ಲಿ 6590 ರಸ್ತೆ ಅಪಘಾತಗಳು ಸಂಭವಿಸಿದ್ದವು. 2010ರಲ್ಲಿ ಈ ಪ್ರಮಾಣ 5,343 ಕ್ಕೆ ಕುಸಿದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಏನಿದು ಬಿ-ಟ್ರ್ಯಾಕ್ ?:
ಮಾಹಿತಿ ತಂತ್ರಜ್ಞಾನ ಬಳಸಿಕೊಂಡು ಇ-ಆಡಳಿತವನ್ನು ಕಾರ್ಯರೂಪಕ್ಕೆ ತರುವುದು. 2-3 ವರ್ಷಗಳಿಂದ ನಗರದಲ್ಲಿ ಸಂಚಾರ ನಿಯಂತ್ರಣ ಕ್ರಮಗಳು ಸಂಪೂರ್ಣವಾಗಿ ಇ-ಆಡಳಿತದಲ್ಲಿದ್ದು, ಕಾಗದ ರಹಿತವಾಗಿದೆ. ರಾಜ್ಯ ಸರಕಾರದ ಆರ್ಥಿಕ ನೆರವಿನೊಂದಿಗೆ 120 ಕೋಟಿ ರು. ವೆಚ್ಚದ ಈ ಯೋಜನೆಯನ್ನು 2008 ಮತ್ತು 2010ನೇ ಅವಧಿಯಲ್ಲಿ ಬಿ-ಟ್ರ್ಯಾಕ್ ಅನ್ನು ಯಶಸ್ವಿಯಾಗಿ ಅಳವಡಿಸಲಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications