ಹಾಲಪ್ಪ ರೇಪ್ ಪ್ರಕರಣ ಸಿಬಿಐ ತನಿಖೆಗೆ?

ನಿಷ್ಪಕ್ಷಪಾತವಾದ ತನಿಖೆಯನ್ನು ಸಿಐಡಿಯಿಂದ ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದು ಚಂದ್ರಾವತಿ ವೆಂಕಟೇಶ್ ಮೂರ್ತಿ ದಂಪತಿಗಳು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ನಂತರ ಈ ಬಗ್ಗೆ ಹೈಕೋರ್ಟ್ ಗೆ ಅರ್ಜಿ ಹಾಕಲಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸದಂತೆ ಮನವಿ ಮಾಡಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 8ಕ್ಕೆ ಮುಂದೂಡಲಾಗಿದೆ.
ಕೇಸ್ ಹಿಸ್ಟರಿ: ವೆಂಕಟೇಶಮೂರ್ತಿ ಮತ್ತು ಚಂದ್ರಾವತಿ ದಂಪತಿಗಳ ಮನೆಗೆ ಭೋಜನಕ್ಕಾಗಿ ಬಂದಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ, ನಡುರಾತ್ರಿಯಲ್ಲಿ ವೆಂಕಟೇಶಮೂರ್ತಿ ಅವರನ್ನು ಮಾತ್ರೆ ತರಲು ಗೆಸ್ಟ್ ಹೌಸ್ ಗೆ ಕಳಿಸಿ ಅವರ ಪತ್ನಿ ಚಂದ್ರಾವತಿ ಮೇಲೆ ಅತ್ಯಾಚಾರ ನಡೆಸಿದ್ದರು ಎನ್ನುವುದು ಹಾಲಪ್ಪ ಅವರ ಮೇಲಿರುವ ಗಂಭೀರ ಆರೋಪ. ಇದೇ ಕಾರಣ ಅವರು ತಮ್ಮ ಮಂತ್ರಿ ಪದವಿಯನ್ನು ಕಳೆದುಕೊಂಡಿದ್ದರು.
ನಂತರ ಹಲವು ವಲಯಗಳಿಂದ ತೀವ್ರ ಒತ್ತಡ ಬಂದ ನಂತರ ಮುಖ್ಯಮಂತ್ರಿ ಯಡಿಯೂರಪ್ಪಅವರು ಹಾಲಪ್ಪ ಅತ್ಯಾಚಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದರು. ಇತ್ತ ಹಾಲಪ್ಪ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಜಂಪ್ ಮಾಡುತ್ತಾ ಜೈಲುವಾಸ ತಪ್ಪಿಸಿಕೊಂಡು ಹೈಕೋರ್ಟ್ ನಿಂದ ಜಾಮೀನು ಪಡೆದು ಊರು ಸೇರಿದ್ದರು.
ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಮಾಜಿ ಕಾರ್ಯದರ್ಶಿ ಹುಲ್ತಿಕೊಪ್ಪ ಶ್ರೀಧರ್ ಈ ಸಂಚಿನಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಸಿಐಡಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಅದು ಬಿಟ್ಟರೆ ಸಿಐಡಿಯಿಂದಾಗಲಿ, ಹಾಲಪ್ಪ ಹಾಗೂ ಅವರ ಬೆಂಬಲಿಗರ ಕಡೆಯಿಂದ ಯಾವುದೇ ಬಿಸಿ ಬಿಸಿ ಸುದ್ದಿ ಹೊರಬಂದಿರಲಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications