ಹಾಲಪ್ಪ ರೇಪ್ ಪ್ರಕರಣ ಸಿಬಿಐ ತನಿಖೆಗೆ?

ನಿಷ್ಪಕ್ಷಪಾತವಾದ ತನಿಖೆಯನ್ನು ಸಿಐಡಿಯಿಂದ ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದು ಚಂದ್ರಾವತಿ ವೆಂಕಟೇಶ್ ಮೂರ್ತಿ ದಂಪತಿಗಳು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ನಂತರ ಈ ಬಗ್ಗೆ ಹೈಕೋರ್ಟ್ ಗೆ ಅರ್ಜಿ ಹಾಕಲಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸದಂತೆ ಮನವಿ ಮಾಡಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 8ಕ್ಕೆ ಮುಂದೂಡಲಾಗಿದೆ.
ಕೇಸ್ ಹಿಸ್ಟರಿ: ವೆಂಕಟೇಶಮೂರ್ತಿ ಮತ್ತು ಚಂದ್ರಾವತಿ ದಂಪತಿಗಳ ಮನೆಗೆ ಭೋಜನಕ್ಕಾಗಿ ಬಂದಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ, ನಡುರಾತ್ರಿಯಲ್ಲಿ ವೆಂಕಟೇಶಮೂರ್ತಿ ಅವರನ್ನು ಮಾತ್ರೆ ತರಲು ಗೆಸ್ಟ್ ಹೌಸ್ ಗೆ ಕಳಿಸಿ ಅವರ ಪತ್ನಿ ಚಂದ್ರಾವತಿ ಮೇಲೆ ಅತ್ಯಾಚಾರ ನಡೆಸಿದ್ದರು ಎನ್ನುವುದು ಹಾಲಪ್ಪ ಅವರ ಮೇಲಿರುವ ಗಂಭೀರ ಆರೋಪ. ಇದೇ ಕಾರಣ ಅವರು ತಮ್ಮ ಮಂತ್ರಿ ಪದವಿಯನ್ನು ಕಳೆದುಕೊಂಡಿದ್ದರು.
ನಂತರ ಹಲವು ವಲಯಗಳಿಂದ ತೀವ್ರ ಒತ್ತಡ ಬಂದ ನಂತರ ಮುಖ್ಯಮಂತ್ರಿ ಯಡಿಯೂರಪ್ಪಅವರು ಹಾಲಪ್ಪ ಅತ್ಯಾಚಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದರು. ಇತ್ತ ಹಾಲಪ್ಪ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಜಂಪ್ ಮಾಡುತ್ತಾ ಜೈಲುವಾಸ ತಪ್ಪಿಸಿಕೊಂಡು ಹೈಕೋರ್ಟ್ ನಿಂದ ಜಾಮೀನು ಪಡೆದು ಊರು ಸೇರಿದ್ದರು.
ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಮಾಜಿ ಕಾರ್ಯದರ್ಶಿ ಹುಲ್ತಿಕೊಪ್ಪ ಶ್ರೀಧರ್ ಈ ಸಂಚಿನಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಸಿಐಡಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಅದು ಬಿಟ್ಟರೆ ಸಿಐಡಿಯಿಂದಾಗಲಿ, ಹಾಲಪ್ಪ ಹಾಗೂ ಅವರ ಬೆಂಬಲಿಗರ ಕಡೆಯಿಂದ ಯಾವುದೇ ಬಿಸಿ ಬಿಸಿ ಸುದ್ದಿ ಹೊರಬಂದಿರಲಿಲ್ಲ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications