ಕ್ರಿಕೆಟ್ ಗೆ ಸೌರವ್ ಗಂಗೂಲಿ 'ಅಲ್ವಿದಾ'

ಬೆಂಗಳೂರಿನಲ್ಲಿ ನಡೆದ ಐಪಿಎಲ್ ಬಿಡ್ ಸಮಯದಲ್ಲಿ ಹರಾಜಾಗದಿದ್ದ ಗಂಗೂಲಿ ಅವರನ್ನು ಟೀಮ್ ಕೊಚ್ಚಿ ತಂಡ ಖರೀದಿಸಲು ಮುಂದಾಗಿತ್ತು. ಆದರೆ ಈ ಪ್ರಕ್ರಿಯೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದಂತೆ ಹಲವು ಫ್ರಾಂಚೈಸಿಗಳು ವಿರೋಧ ವ್ಯಕ್ತಪಡಿಸಿದ್ದವು. ಹಾಗಾಗಿ ಐಪಿಎಲ್ ಆಡಳಿತ ಮಂಡಳಿ ಗಂಗೂಲಿ ಮರು ಸೇರ್ಪಡೆಗೆ ಒಪ್ಪಿಗೆ ನೀಡಿರಲಿಲ್ಲ. ಐಪಿಎಲ್ನಲ್ಲಿ ಆಡುತ್ತೇನೆ ಎನ್ನುವ ನಿರೀಕ್ಷೆಗಳು ಹುಸಿಯಾದವು. ಆದ್ದರಿಂದ ದೇಶದಲ್ಲಿ ನಡೆಯುವ ಇತರ ಟೂರ್ನಿಗಳಲ್ಲಿ ಆಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಗಂಗೂಲಿ ಹೇಳಿದ್ದಾರೆ.
1996ರಲ್ಲಿ ಕ್ರಿಕೆಟ್ನ ಕಾಶಿ ಎಂದೇ ಹೆಸರಾದ ಇಂಗ್ಲೆಂಡಿನ ಲಾರ್ಡ್ಸ್ ಮೈದಾನದಲ್ಲಿ ತಮ್ಮ ಮೊಟ್ಟಮೊದಲ ಟೆಸ್ಟ್ ಪಂದ್ಯದಲ್ಲಿಯೇ ಶತಕ ಗಳಿಸುವ ಮೂಲಕ ತಮ್ಮ ವೃತ್ತಿ ಜೀವನವನ್ನು ಭರ್ಜರಿಯಾಗಿ ಗಂಗೂಲಿ ಪ್ರಾರಂಭಿಸಿದ್ದರು. ಮ್ಯಾಚ್ ಫಿಕ್ಸಿಂಗ್ ಹಗರಣದ ನಂತರ 2000ದಲ್ಲಿ ತಂಡದ ನಾಯಕತ್ವ ವಹಿಸಿಕೊಂಡ ಗಂಗೂಲಿ ಭಾರತ ಕಂಡ ಅತ್ಯಂತ ಯಶಸ್ವಿ ನಾಯಕ. ಗಂಗೂಲಿ ನಾಯಕರಾಗಿದ್ದ 49 ಟೆಸ್ಟ್ ಪಂದ್ಯಗಳಲ್ಲಿ ಭಾರತ 21 ಟೆಸ್ಟ್ಗಳಲ್ಲಿ ಜಯಗಳಿಸಿತ್ತು.
ವಿಡಿಯೋ:ಕ್ರಿಕೆಟ್ ಜಗತ್ತಿನ ದಾದಾ ವಿದಾಯ
100 ಟೆಸ್ಟ್ ಪಂದ್ಯಗಳನ್ನು ಆಡಿರುವ ಗಂಗೂಲಿ ಭಾರತದ ಏಳನೇ ಆಟಗಾರ. ಅಲ್ಲದೆ 300ಕ್ಕೂ ಹೆಚ್ಚಿನ ಏಕದಿನ ಪಂದ್ಯಗಳನ್ನು ಆಡಿ 10,000ಕ್ಕೂ ಹೆಚ್ಚಿನ ರನ್ ಗಳಿಸಿದ್ದಾರೆ. ತಂಡಕ್ಕೆ ಸ್ಫೂರ್ತಿ ನೀಡುವುದರಲ್ಲಿ ಹೆಚ್ಚಿನ ಗಮನ ವಹಿಸಿದ್ದ ಗಂಗೂಲಿ ಏಕದಿನದಲ್ಲಿ ಸಚಿನ್ ಜೊತೆ ಅತ್ಯಂತ ಹೆಚ್ಚಿನ ಶತಕದ ಜೊತೆಯಾಟ ಆಡಿದ ದಾಖಲೆಯನ್ನು ಹೊಂದಿದ್ದಾರೆ.
ಪ್ರಿನ್ಸ್ ಆಫ್ ಕೋಲ್ಕತ್ತಾಗೆ ಏನಾಯಿತು?: 07 .10 .2008 ರಂದು ಗಂಗೂಲಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಪ್ರಕಟಿಸಿದ್ದರು. ಕಳೆದ ಮೂರು ಐಪಿಎಲ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಆಡಿದ್ದ ದಾದಾ ಅವರನ್ನು ಈ ಸಲ ಶಾರೂಖ್ ಖಾನ್ ನೇತೃತ್ವದ ನೈಟ್ ರೈಡರ್ಸ್ ಸಹಾ ಕೈಬಿಟ್ಟಿತ್ತು.
ತನ್ನ ನಾಯಕತ್ವದ ಅವಧಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆಲುವು ದಾಖಲಿಸಿದ್ದು, ಇಂಗ್ಲೆಂಡ್ನಲ್ಲಿ ನಡೆದ ನ್ಯಾಟ್ವೆಸ್ಟ್ ಏಕದಿನ ತ್ರಿಕೋನ ಸರಣಿಯಲ್ಲಿ ಗೆಲುವು ಸಾಧಿಸಿದ ಬಳಿಕ ಲಾರ್ಡ್ಸ್ನ ಡ್ರೆಸಿಂಗ್ ರೂಂನಲ್ಲಿ ತನ್ನ ಶರ್ಟು ಬಿಚ್ಚಿ ಗಾಳಿಯಲ್ಲಿ ತಿರುಗಿಸಿದ್ದು, 2003ರ ಏಕದಿನ ವಿಶ್ವಕಪ್ನಲ್ಲಿ ಭಾರತವನ್ನು ಫೈನಲ್ಗೇರಿಸಿದ್ದು, ಆ ಬಳಿಕ ಕೋಚ್ ಗ್ರೆಗ್ ಚಾಪೆಲ್ ಜೊತೆಗೆ ಬಾಂಧವ್ಯದಲ್ಲಿ ಬಿರುಕು ಸೃಷ್ಟಿ ಮಾಡಿಕೊಂಡಿದ್ದು ಗಂಗೂಲಿ ಕ್ರಿಕೆಟ್ ಜೀವನದ ಪ್ರಮುಖ ಹಂತಗಳೆನಿಸಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications