ಅಜಾತಶತ್ರು, ಮುತ್ಸದ್ದಿ ಎಂಪಿ. ಪ್ರಕಾಶ್ ಇನ್ನಿಲ್ಲ

ಜನತಾ ಪರಿವಾರದ ಹಿರಿಯ ರಾಜಕಾರಣಿಯಾಗಿದ್ದ ಮಠದ ಪಾಟೀಲ್ ಪ್ರಕಾಶ್ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಲೇಖಕ, ರಂಗಕರ್ಮಿ, ನಟ ಸಹ ಆಗಿದ್ದ ಮೃತರು ಪತ್ನಿ, ಒಬ್ಬ ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಸಾರ್ವಜನಿಕ ದರ್ಶನಕ್ಕಾಗಿ ಪ್ರಕಾಶ್ ಪಾರ್ಥಿವ ಶರೀರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿಡಲಾಗಿದೆ. ಅಂತ್ಯಕ್ರಿಯೆ ಹೂವಿನಹಡಗಲಿಯಲ್ಲಿ ಗುರುವಾರ ನೆರವೇರಲಿದೆ.
ಉದ್ಯಮಿಯಾಗಿಯೂ ಮಿಂಚಿದ್ದ ಎಂಪಿ ಪ್ರಕಾಶ್
ಸಾಂಸ್ಕೃತಿಕ ಲೋಕದಲ್ಲಿ ಗಟ್ಟಿಯಾಗಿ ಗುರುತಿಸಿಕೊಂಡಿದ್ದ ನಿರ್ಮತ್ಸರ ಗುಣದ ಪ್ರಕಾಶ್, ಉತ್ತಮ ವಾಗ್ಮಿ ಸಹ. ಕೆಲವು ವರ್ಷಗಳಿಂದ ಅವರು ಕ್ಯಾನ್ಸರ್ ಪೀಡಿತರಾಗಿದ್ದರು. ಆದರೂ ರಾಜಕೀಯವಾಗಿ ಮತ್ತು ಸಾಹಿತ್ಯ ಲೋಕದಲ್ಲಿ ಸಕ್ರಿಯರಾಗಿದ್ದರು.
ಪ್ರಕಾಶ್ ನಿಧನದ ವಾರ್ತೆ ತಿಳಿಯುತ್ತಿದ್ದಂತೆ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮೃತರ ಅಂತಿಮ ದರ್ಶನ ಪಡೆದರು. ಹಿರಿಯ ಜೀವಿ ಪ್ರಕಾಶ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ ಯಡಿಯೂರಪ್ಪ ಅವರು ಬಳ್ಳಾರಿ ಜಿಲ್ಲೆಯಾದ್ಯಂತ ಫೆ. 9 ಮತ್ತು 10ರಂದು ಮೃತರ ಗೌರವಾರ್ಥ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ 1960ರ ದಶಕದಲ್ಲಿ ಸಾಮಾಜಿಕವಾಗಿ ಗುರುತಿಸಿಕೊಂಡ ಪ್ರಕಾಶ್, ಸಮಾಜವಾದಿಯಾಗಿದ್ದರು. 1963ರಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ್ದರು. ಸತತವಾಗಿ ಹೂವಿನಹಡಗಲಿ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಗೊಂಡಿದ್ದ ಪ್ರಕಾಶ್, ರಾಜಕೀಯ ಸ್ಥಿತ್ಯಂತರಗಳಿಂದಾಗಿ ಹರಪನಹಳ್ಳಿಯಿಂದ ಸ್ಪರ್ಧಿಸಬೇಕಾಯಿತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications