ಅಜಾತಶತ್ರು, ಮುತ್ಸದ್ದಿ ಎಂಪಿ. ಪ್ರಕಾಶ್ ಇನ್ನಿಲ್ಲ

ಜನತಾ ಪರಿವಾರದ ಹಿರಿಯ ರಾಜಕಾರಣಿಯಾಗಿದ್ದ ಮಠದ ಪಾಟೀಲ್ ಪ್ರಕಾಶ್ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಲೇಖಕ, ರಂಗಕರ್ಮಿ, ನಟ ಸಹ ಆಗಿದ್ದ ಮೃತರು ಪತ್ನಿ, ಒಬ್ಬ ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಸಾರ್ವಜನಿಕ ದರ್ಶನಕ್ಕಾಗಿ ಪ್ರಕಾಶ್ ಪಾರ್ಥಿವ ಶರೀರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿಡಲಾಗಿದೆ. ಅಂತ್ಯಕ್ರಿಯೆ ಹೂವಿನಹಡಗಲಿಯಲ್ಲಿ ಗುರುವಾರ ನೆರವೇರಲಿದೆ.
ಉದ್ಯಮಿಯಾಗಿಯೂ ಮಿಂಚಿದ್ದ ಎಂಪಿ ಪ್ರಕಾಶ್
ಸಾಂಸ್ಕೃತಿಕ ಲೋಕದಲ್ಲಿ ಗಟ್ಟಿಯಾಗಿ ಗುರುತಿಸಿಕೊಂಡಿದ್ದ ನಿರ್ಮತ್ಸರ ಗುಣದ ಪ್ರಕಾಶ್, ಉತ್ತಮ ವಾಗ್ಮಿ ಸಹ. ಕೆಲವು ವರ್ಷಗಳಿಂದ ಅವರು ಕ್ಯಾನ್ಸರ್ ಪೀಡಿತರಾಗಿದ್ದರು. ಆದರೂ ರಾಜಕೀಯವಾಗಿ ಮತ್ತು ಸಾಹಿತ್ಯ ಲೋಕದಲ್ಲಿ ಸಕ್ರಿಯರಾಗಿದ್ದರು.
ಪ್ರಕಾಶ್ ನಿಧನದ ವಾರ್ತೆ ತಿಳಿಯುತ್ತಿದ್ದಂತೆ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮೃತರ ಅಂತಿಮ ದರ್ಶನ ಪಡೆದರು. ಹಿರಿಯ ಜೀವಿ ಪ್ರಕಾಶ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ ಯಡಿಯೂರಪ್ಪ ಅವರು ಬಳ್ಳಾರಿ ಜಿಲ್ಲೆಯಾದ್ಯಂತ ಫೆ. 9 ಮತ್ತು 10ರಂದು ಮೃತರ ಗೌರವಾರ್ಥ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ 1960ರ ದಶಕದಲ್ಲಿ ಸಾಮಾಜಿಕವಾಗಿ ಗುರುತಿಸಿಕೊಂಡ ಪ್ರಕಾಶ್, ಸಮಾಜವಾದಿಯಾಗಿದ್ದರು. 1963ರಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ್ದರು. ಸತತವಾಗಿ ಹೂವಿನಹಡಗಲಿ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಗೊಂಡಿದ್ದ ಪ್ರಕಾಶ್, ರಾಜಕೀಯ ಸ್ಥಿತ್ಯಂತರಗಳಿಂದಾಗಿ ಹರಪನಹಳ್ಳಿಯಿಂದ ಸ್ಪರ್ಧಿಸಬೇಕಾಯಿತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications