ಇಡಗುಂಜಿ ದೇವಸ್ಥಾನದಲ್ಲಿ ಅರ್ಚಕರಿಂದ ಮಾರಾಮಾರಿ

ಕನ್ನಡ ನಾಡಿನ ದೇವಾಲಯಗಳಲ್ಲಿ ಇಂತಹ ಅಪವ್ಯಸನಗಳು ಸಂಭವಿಸದು ಎಂಬ ದೃಢ ವಿಶ್ವಾಸ ಇಲ್ಲಿನ ಭಕ್ತಾಧಿಗಳದು. ಆದರೆ ಇದಕ್ಕೆ ಸಂಚಕಾರ ತರುವ ಘಟನೆ ಸುಪ್ರಸಿದ್ಧ ಇಡಗುಂಜಿ ಗಣೇಶನ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದಿದೆ. ಆಘಾತಕಾರಿ ಸಂಗತಿಯೆಂದರೆ ಈ ಮಾರಾಮಾರಿ ಘಟನೆ ಇಡಗುಂಜಿ ಪ್ರಾಂಗಣದಲ್ಲೇ ಕೊನೆಗೊಳ್ಳದೆ, ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಏನಾಗಿದೆಯೆಂದರೆ, ಉತ್ತರ ಕನ್ನಡದ ಇಡಗುಂಜಿ ದೇವಸ್ಥಾನದಲ್ಲಿ ಗಣೇಶನಿಗೆ ಪೂಜೆ ಮಾಡುವ ಹಕ್ಕಿಗಾಗಿ ವಂಶಪಾರಂಪರ್ಯವಾಗಿ ಬೆಳೆದುಬಂದ ಅರ್ಚಕರು ಮತ್ತು ದೇವಸ್ಥಾನದ ಟ್ರಸ್ಟಿಗಳ ಮಧ್ಯೆ ಆಗಾಗ ಕಿತ್ತಾಟ ನಡೆಯುತ್ತಿದೆ. ಹಾಗೆಂದೇ ಮೊನ್ನೆಯೂ ಗರ್ಭಗುಡಿಯಲ್ಲಿ ಗಣೇಶನ ಪೂಜಾಕೈಂಕರ್ಯಗಳು ಸಾಂಗೋಪಾಂಗವಾಗಿ ನಡೆದಿತ್ತು. ಆ ಗಳಿಗೆಯಲ್ಲಿ ಅದೆಲ್ಲಿಂದ ಬಂತೋ ಮತ್ತೊಂದು ಅರ್ಚಕರ ಗುಂಪು ಗರ್ಭಗುಡಿಯಲ್ಲೇ ಕೈಕೈ ಮಿಲಾಯಿಸಿದೆ. ಪೂಜೆಯಲ್ಲಿ ನಿರತರಾಗಿದ್ದ ಅರ್ಚಕರನ್ನು ಅಟ್ಟಾಡಿಸಿಕೊಂಡು ಬಡಿದಿದೆ. ದೂರದೂರುಗಳಿಂದ ಬಂದಿದ್ದ ಭಕ್ತರು ಇದನ್ನು ಕಣ್ಣಾರೆ ಕಂಡು ಶಿವ, ಶಿವ ಎಂದಿದ್ದಾರೆ.
ಆದರೆ ಸ್ಥಳೀಯರಿಗೆ ಇತ್ತೀಚಿನ ದಿನಗಳಲ್ಲಿ ಇದು ಸಾಮಾನ್ಯವಾಗಿದೆ. ಟ್ರಸ್ಟಿಗಳು ನೇಮಿಸಿದ ಅರ್ಚಕರದ್ದು ಒಂದು ಗುಂಪು ಮತ್ತು ಸಾಂಪ್ರದಾಯಿಕವಾಗಿ ಪೂಜೆ ಮಾಡಿಕೊಂಡು ಬಂದಿರುವ ಅರ್ಚಕರದ್ದು ಮತ್ತೊಂದು ಗುಂಪು ಇಲ್ಲಿ ದಿನಬೆಳಗಾದರೆ ಪರಸ್ಪರ 'ಪೂಜೆ'ಯಲ್ಲಿ ತೊಡಗುವುದು ಸಾಮಾನ್ಯವಾಗಿದೆ. ಇಷ್ಟಕ್ಕೇ ಸುಮ್ಮನಾಗದ ಅರ್ಚಕರು, ಪರಸ್ಪರ ಬೆಂಬಲಿಗರನ್ನೂ ಸೃಷ್ಟಿಸಿಕೊಂಡಿದ್ದಾರೆ. ಅರ್ಚಕರು ಕಾದಾಟಕ್ಕೆ ಇಳಿಯುತ್ತಿದ್ದಂತೆ ಇವರು ಒಂದು ಕೈ ನೋಡಿಕೊಳ್ಳುತ್ತಾರೆ. ಕೆಲವರ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಸಹ ಹೊರಡಿಸಲಾಗಿದೆ. ಇಷ್ಟೆಲ್ಲ ಆದರೂ ಪರಿಸ್ಥಿತಿ ಇಂದಿಗೂ ತಿಳಿಯಾಗದಿರುವುದು ದುರ್ದೈವದ ಸಂಗತಿಯಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications