ಅನಿತಾ ರೆಡ್ಡಿಗೆ ನಮ್ಮ ಬೆಂಗಳೂರು 2010 ಪ್ರಶಸ್ತಿ

ತೀರ್ಪುಗಾರರ ಪರವಾಗಿ ಮಾತನಾಡಿದ ನಮ್ಮ ಬೆಂಗಳೂರು ಪ್ರತಿಷ್ಠಾನದ ಅಧ್ಯಕ್ಷ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ' ಪ್ರಶಸ್ತಿಗಳಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ನಗರದ ಬೆಳವಣಿಗೆಗೆ ಇನ್ನಷ್ಟು ಕೊಡುಗೆ ನೀಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ' ಎಂದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 10 ಸಾವಿರಕ್ಕೂ ಹೆಚ್ಚು ವ್ಯಕ್ತಿಗಳಲ್ಲಿ ಅಂತಿಮವಾಗಿ 10 ಮಂದಿಯನ್ನು ಆಯ್ಕೆ ಮಾಡಿ ಗೌರವಿಸಲಾಗಿದೆ.
ಚುನಾಯಿತ ಜನಪ್ರತಿನಿಧಿ ವಿಭಾಗದಲ್ಲಿ ನಮ್ಮ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯಕುಮಾರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಿಬಿಎಂಪಿ ಆಯುಕ್ತ ಎಚ್ ಸಿದ್ದಯ್ಯ, ದರ್ಶಿನಿ ಹೋಟೆಲ್ ಸಮೂಹದ ಒಡೆಯ ವಾಸುದೇವ ಅಡಿಗ, ಅನಾಥ ಶವರಕ್ಷಕ ಟಿ.ರಾಜಾ ಮೊದಲಾದವರಿಗೆ ಈ ಪ್ರಶಸ್ತಿ ಸಂದಿದೆ.
ಪ್ರಶಸ್ತಿ ಪಡೆದವರ ಪಟ್ಟಿ:
* ಸಾರ್ವಜನಿಕ ವ್ಯಕ್ತಿ : ಸಿದ್ದಯ್ಯ
* ಜನ ಪ್ರತಿನಿಧಿ: ಬಿ.ಎನ್ ವಿಜಯಕುಮಾರ್
* ಸಾರ್ವಜನಿಕ ಸಂಸ್ಥೆ: ಬಿಎಂಟಿಸಿ
* ಖಾಸಗಿ ಸಂಸ್ಥೆ : ಚಿಲ್ಡ್ರನ್ ಮೂವ್ ಮೆಂಟ್ ಫಾರ್ ಸಿವಿಕ್ ಅವೇರ್ ನೆಸ್ (CMCA)
* ಖಾಸಗಿ ವ್ಯಕ್ತಿಗಳು : ಡಾ. ರಾಧಾ ಎಸ್ ಮೂರ್ತಿ ಮತ್ತು ಟಿ. ರಾಜಾ
* ಕ್ರೀಡಾಪಟು : ವಿಜಯ್ ರಾವ್ ಶಿಂಧೆ ಮತ್ತು ಅನುಪಮಾ ಪಚಿಮಂಡ
* ಉದ್ಯಮಿ: ವಾಸುದೇವ ಅಡಿಗ
ವರ್ಷದ ಬೆಂಗಳೂರಿಗ ಪ್ರಶಸ್ತಿ : ಶ್ರೀಮತಿ ಅನಿತಾ ರೆಡ್ಡಿ, AVAS ಟ್ರಸ್ಟ್ ಸ್ಥಾಪಕಿ, ಕೊಳಗೇರಿ ನಿವಾಸಿಗಳನ್ನು ಸುಶಿಕ್ಷಿತರನ್ನಾಗಿಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆ.
ನಮ್ಮ ಬೆಂಗಳೂರು ಪ್ರಶಸ್ತಿ : ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಉದ್ಯಮಿಗಳು, ಸ್ವಯಂ ಸೇವಾ ಸಂಘಗಳು, ಎನ್ ಜಿಒಗಳು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಸಾಮಾನ್ಯ ಸಾಧನೆ ತೋರಿರುವ ಜನ ಸಮಾನ್ಯರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ನಾಗರೀಕರೇ ಮತ ನೀಡುವ ಮೂಲಕ ವಿಜೇತರನ್ನು ಆಯ್ಕೆ ಮಾಡುವ ಈ ಪ್ರಶಸ್ತಿ ಇಡೀ ದೇಶದಲ್ಲೇ ವಿಶಿಷ್ಟವಾಗಿದೆ. ಈ ಬಾರಿ ಸುಮಾರು 8 ವಿಭಾಗಗಳಿಗೆ 10 ಸಾವಿರಕ್ಕೂ ಹೆಚ್ಚು ನಾಮನಿರ್ದೇಶನಗಳನ್ನು ಸ್ವೀಕರಿಸಲಾಗಿತ್ತು.
ತೀರ್ಪುಗಾರರು: ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಸಂಸದ ರಾಜೀವ್ ಚಂದ್ರಶೇಖರ್, ಅನಿಲ್ ಕುಂಬ್ಳೆ, ತೇಜಸ್ವಿನಿ ಅನಂತಕುಮಾರ್, ಪ್ರಕಾಶ್ ಬೆಳವಾಡಿ, ಜಿ.ಎಸ್ ಸಿದ್ದಲಿಂಗಯ್ಯ ನಿವೃತ್ತ ಐಎಎಸ್ ಅಧಿಕಾರಿ ಡಾ. ಎ ರವೀಂದ್ರ ಸೇರಿದಂತೆ 23 ಜನ ಗಣ್ಯರು ಸಮಿತಿಯಲ್ಲಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications