ಅನಿತಾ ರೆಡ್ಡಿಗೆ ನಮ್ಮ ಬೆಂಗಳೂರು 2010 ಪ್ರಶಸ್ತಿ

ತೀರ್ಪುಗಾರರ ಪರವಾಗಿ ಮಾತನಾಡಿದ ನಮ್ಮ ಬೆಂಗಳೂರು ಪ್ರತಿಷ್ಠಾನದ ಅಧ್ಯಕ್ಷ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ' ಪ್ರಶಸ್ತಿಗಳಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ನಗರದ ಬೆಳವಣಿಗೆಗೆ ಇನ್ನಷ್ಟು ಕೊಡುಗೆ ನೀಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ' ಎಂದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 10 ಸಾವಿರಕ್ಕೂ ಹೆಚ್ಚು ವ್ಯಕ್ತಿಗಳಲ್ಲಿ ಅಂತಿಮವಾಗಿ 10 ಮಂದಿಯನ್ನು ಆಯ್ಕೆ ಮಾಡಿ ಗೌರವಿಸಲಾಗಿದೆ.
ಚುನಾಯಿತ ಜನಪ್ರತಿನಿಧಿ ವಿಭಾಗದಲ್ಲಿ ನಮ್ಮ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯಕುಮಾರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಿಬಿಎಂಪಿ ಆಯುಕ್ತ ಎಚ್ ಸಿದ್ದಯ್ಯ, ದರ್ಶಿನಿ ಹೋಟೆಲ್ ಸಮೂಹದ ಒಡೆಯ ವಾಸುದೇವ ಅಡಿಗ, ಅನಾಥ ಶವರಕ್ಷಕ ಟಿ.ರಾಜಾ ಮೊದಲಾದವರಿಗೆ ಈ ಪ್ರಶಸ್ತಿ ಸಂದಿದೆ.
ಪ್ರಶಸ್ತಿ ಪಡೆದವರ ಪಟ್ಟಿ:
* ಸಾರ್ವಜನಿಕ ವ್ಯಕ್ತಿ : ಸಿದ್ದಯ್ಯ
* ಜನ ಪ್ರತಿನಿಧಿ: ಬಿ.ಎನ್ ವಿಜಯಕುಮಾರ್
* ಸಾರ್ವಜನಿಕ ಸಂಸ್ಥೆ: ಬಿಎಂಟಿಸಿ
* ಖಾಸಗಿ ಸಂಸ್ಥೆ : ಚಿಲ್ಡ್ರನ್ ಮೂವ್ ಮೆಂಟ್ ಫಾರ್ ಸಿವಿಕ್ ಅವೇರ್ ನೆಸ್ (CMCA)
* ಖಾಸಗಿ ವ್ಯಕ್ತಿಗಳು : ಡಾ. ರಾಧಾ ಎಸ್ ಮೂರ್ತಿ ಮತ್ತು ಟಿ. ರಾಜಾ
* ಕ್ರೀಡಾಪಟು : ವಿಜಯ್ ರಾವ್ ಶಿಂಧೆ ಮತ್ತು ಅನುಪಮಾ ಪಚಿಮಂಡ
* ಉದ್ಯಮಿ: ವಾಸುದೇವ ಅಡಿಗ
ವರ್ಷದ ಬೆಂಗಳೂರಿಗ ಪ್ರಶಸ್ತಿ : ಶ್ರೀಮತಿ ಅನಿತಾ ರೆಡ್ಡಿ, AVAS ಟ್ರಸ್ಟ್ ಸ್ಥಾಪಕಿ, ಕೊಳಗೇರಿ ನಿವಾಸಿಗಳನ್ನು ಸುಶಿಕ್ಷಿತರನ್ನಾಗಿಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆ.
ನಮ್ಮ ಬೆಂಗಳೂರು ಪ್ರಶಸ್ತಿ : ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಉದ್ಯಮಿಗಳು, ಸ್ವಯಂ ಸೇವಾ ಸಂಘಗಳು, ಎನ್ ಜಿಒಗಳು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಸಾಮಾನ್ಯ ಸಾಧನೆ ತೋರಿರುವ ಜನ ಸಮಾನ್ಯರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ನಾಗರೀಕರೇ ಮತ ನೀಡುವ ಮೂಲಕ ವಿಜೇತರನ್ನು ಆಯ್ಕೆ ಮಾಡುವ ಈ ಪ್ರಶಸ್ತಿ ಇಡೀ ದೇಶದಲ್ಲೇ ವಿಶಿಷ್ಟವಾಗಿದೆ. ಈ ಬಾರಿ ಸುಮಾರು 8 ವಿಭಾಗಗಳಿಗೆ 10 ಸಾವಿರಕ್ಕೂ ಹೆಚ್ಚು ನಾಮನಿರ್ದೇಶನಗಳನ್ನು ಸ್ವೀಕರಿಸಲಾಗಿತ್ತು.
ತೀರ್ಪುಗಾರರು: ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಸಂಸದ ರಾಜೀವ್ ಚಂದ್ರಶೇಖರ್, ಅನಿಲ್ ಕುಂಬ್ಳೆ, ತೇಜಸ್ವಿನಿ ಅನಂತಕುಮಾರ್, ಪ್ರಕಾಶ್ ಬೆಳವಾಡಿ, ಜಿ.ಎಸ್ ಸಿದ್ದಲಿಂಗಯ್ಯ ನಿವೃತ್ತ ಐಎಎಸ್ ಅಧಿಕಾರಿ ಡಾ. ಎ ರವೀಂದ್ರ ಸೇರಿದಂತೆ 23 ಜನ ಗಣ್ಯರು ಸಮಿತಿಯಲ್ಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications