ಬೆಂಗಳೂರು ಆಗಸದಲಿ ಮಿಂಚಲಿದೆ ಬಾಲಿವುಡ್ ತಾರೆ

ಹೌದು, ಯುವ ಚಿತ್ರಪ್ರೇಮಿಗಳ ಹೃದಯದರಸ ಬಾಲಿವುಡ್ ತಾರೆ ಶಾಹೀದ್ ಕಪೂರ್ ಎಫ್-16 ಫೈಟರ್ ಜೆಟ್ ವಿಮಾನವನ್ನು ಏರಿ ಆಗಸ ಮಾತ್ರವಲ್ಲ ಭೂಮಿಯ ಮೇಲೆಯೂ ಮಿಂಚಿನ ಸಂಚಾರ ಮಾಡಲಿದ್ದಾರೆ. 30 ರಾಷ್ಟ್ರಗಳ ವೈಮಾನಿಕ ಪ್ರದರ್ಶನ ನೋಡುವುದರ ಜೊತೆಗೆ ಶಾಹೀದ್ ಕಪೂರ್ ಅವರನ್ನು ಕೂಡ ನೋಡಲು ಜನ ಸಾಗರದೋಪಾದಿಯಲ್ಲಿ ಬರುತ್ತಿದ್ದಾರೆ. ಶಾಹೀದ್ ಈಗಾಗಲೆ ವಾಯುನೆಲೆಗೆ ಬಂದಿದ್ದು, ಅವರನ್ನು ನೋಡಲು ಹಾತೊರೆಯುತ್ತಿರುವ ಜನಸಂದಣಿಯನ್ನು ನಿಯಂತ್ರಿಸಲು ಭದ್ರತಾ ಪಡೆ ಹರಸಾಹಸ ಪಡುತ್ತಿದೆ. ಶಾಹೀದ್ ಕಪೂರ್ ಅವರಿಗೆ ಭಾರೀ ಬಿಗಿಭದ್ರತೆ ಒದಗಿಸಲಾಗಿದೆ.
ಇದಕ್ಕೂ ಮೊದಲು ಲಾಖೀಡ್ ಮಾರ್ಟಿನ್ ಏರೋನಾಟಿಕ್ಸ್ ಕಂಪನಿ ನಿರ್ದೇಶಿಸಿದ್ದ ಕೆಲ ತರಬೇತಿ ಪರೀಕ್ಷೆಯಲ್ಲಿ ಶಾಹೀದ್ ಪಾಲ್ಗೊಳ್ಳಬೇಕಾಯಿತು. ತಂದೆ ಪಂಕಜ್ ಕಪೂರ್ ಅವರು ನಿರ್ದೇಶನದಲ್ಲಿ ಶಾಹೀದ್ ನಟಿಸುತ್ತಿರುವ ಮೌಸಮ್ ಚಿತ್ರದಲ್ಲಿ ವಾಯುಸೇನಾ ಅಧಿಕಾರಿಯಾಗಿ ನಟಿಸುತ್ತಿದ್ದಾರೆ. ಸಹಜ ಅನುಭವ ಪಡೆಯಲೆಂದು ಶಾಹೀದ್ ಜೆಟ್ ವಿಮಾನ ಹಾರಾಟ ನಡೆಸಲಿದ್ದಾರೆ.
ಕ್ರಿಕೆಟ್ ವಿಶ್ವಕಪ್ 2011 ಆರಂಭವಾಗುವ ಮುನ್ನ ಬೆಂಗಳೂರಿನಲ್ಲಿ ಅಭ್ಯಾಸ ಪಂದ್ಯವಾಡಲು ಬಂದಿರುವ ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ ಯುದ್ಧ ವಿಮಾನವೇರಲು ಉತ್ಸುಕತೆ ತೋರಿದ್ದಾರೆ ಎನ್ನಲಾಗಿದೆ. ಅವರೊಂದಿಗೆ, ಸೇನಾ ಪಡೆಯಲ್ಲಿ ಗೌರವ ಗ್ರೂಪ್ ಕ್ಯಾಪ್ಟನ್ ಆಗಿರುವ ಸಚಿನ್ ತೆಂಡೂಲ್ಕರ್ ಕೂಡ ಯಲಹಂಕ ವಾಯುನೆಲೆಗೆ ಬರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಪ್ರವೇಶ ಗೊಂದಲ : ಸಾರ್ವಜನಿಕರಿಗೆ ಶನಿವಾರ ಮತ್ತು ಭಾನುವಾರ ಮಾತ್ರ ವೈಮಾನಿಕ ಪ್ರದರ್ಶನ ತೆರೆದಿರುವುದರಿಂದ ಸಾರ್ವಜನಿಕರು ಕುಟುಂಬಸಮೇತರಾಗಿ ಭಾರೀ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಪ್ರವೇಶ ಹಂತದಲ್ಲಿ ಬಾರೀ ಗೊಂದಲ ಏರ್ಪಟ್ಟಿದೆ. ಭದ್ರತೆ ಕಟ್ಟುನಿಟ್ಟು ಮಾಡಿರುವುದರಿಂದ ಗೇಟ್ 1ರಲ್ಲಿ ಪ್ರವೇಶ ನಿರಾಕರಿಸಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಟಿಕೆಟ್ ಪಡೆಯದೆ ರಸ್ತೆಯಲ್ಲಿ ಜಮಾಯಿಸಿರುವ ಜನ ಹೊರಗಿನಿಂದಲೇ ಆಗಸದಲ್ಲಿ ಹಾರಾಡುತ್ತಿರುವ ಲೋಹದ ಹಕ್ಕಿಗಳನ್ನು ನೋಡಿ ಆನಂದಿಸುತ್ತಿದ್ದಾರೆ. ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರ ಅಕ್ಷರಶಃ ನಿಂತಿದೆ. ರಸ್ತೆ ಮಾತ್ರವಲ್ಲ, ಸುತ್ತಮುತ್ತಲಿನ ಮನೆಗಳ ಮೇಲೂ ಜನ ನಿಂತು ವಿಮಾನಗಳ ಹಾರಾಟವನ್ನು ನೋಡುತ್ತಿದ್ದಾರೆ. ಕೆಲವೆಡೆಗಳಲ್ಲಿ ವಿದ್ಯುತ್ ಕಂಬ, ಮರಗಳನ್ನು ಕೂಡ ಏರಿ ವಿಮಾನ ವೀಕ್ಷಣೆ ಮಾಡುತ್ತಿದ್ದಾರೆ. ಏರೋ ಇಂಡಿಯಾ 2011ಗೆ ಭಾನುವಾರ ಕೊನೆಯ ದಿನವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications