ನಾಗರಬಾವಿ: ಕಾಂಗ್ರೆಸ್ ಬಿಜೆಪಿ ಜಟಾಪಟಿ ಕೃಷ್ಣ ಕೃಷ್ಣಾ!

ವಾರ್ಡ್ ನಂಬರ್ 128 ನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಇಂದು ನಾಗರಭಾವಿ ಸರ್ಕಲ್ ನಲ್ಲಿ ಬಿಬಿಎಂಪಿ ಹಮ್ಮಿಕೊಂಡಿತ್ತು. ಆದರೆ ಶಾಸಕ ಪ್ರಿಯಕೃಷ್ಣ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಏಕ್ಕೆ? ಎಂದು ಅವರ ಬೆಂಬಲಿಗರು ಘೋಷಣೆ ಕೂಗುತ್ತಾ, ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಗೃಹಸಚಿವ ಆರ್ ಅಶೋಕ್ ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಸಮಾಧಾನಪಡಿಸಲು ಯತ್ನಿಸಿದರೂ ಸಫಲರಾಗಲಿಲ್ಲ.
ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಮಾರಾಮಾರಿ ಆರಂಭವಾಗಿದೆ. ಯಾಕೃಷ್ಣ ಅವರ ಬೆಂಬಲಿಗರು ವೇದಿಕೆಗೆ ನುಗ್ಗಿ ದಾಂಧಲೆ ನಡೆಸತೊಡಗಿದ್ದಾರೆ. ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಎನಿಸಿ ಮಧ್ಯೆ ಪ್ರವೇಶಿಸಿದ ಪೊಲೀಸರಿಗೂ ಗೂಸಾ ಬಿದ್ದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ ಪೊಲೀಸರು ಕಾರ್ಯಕರ್ತರನ್ನು ಚದುರಿಸಿ, ಕಾರ್ಯಕ್ರಮ ಮುಂದುವರೆವಂತೆ ಮಾಡಿದ್ದಾರೆ.











Click it and Unblock the Notifications