ಬೆಂಗಳೂರಿನ ಶಾಲೆಗೆ ಪ್ರೇಮ ಬಾಣ ನಾಟಿದೆ !

ಎಲ್ಲಾ ಸರಿ, ಪ್ರೇಮಿಗಳ ದಿನಾಚರಣೆ ಏಕೆ? : ಮಕ್ಕಳ ನಡುವೆ ಪ್ರೀತಿ, ಶಾಂತಿಯ ವಾತಾವರಣ ಸೃಷ್ಟಿಸಲು ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದೇವೆ. ಮಕ್ಕಳ ಪೋಷಕರು, ಸ್ನೇಹಿತರು ಸಹಾ ಇದರಲ್ಲಿ ಪಾಲ್ಗೊಳ್ಳುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಮಕ್ಕಳಲ್ಲಿ ಸಾಮಾಜಿಕ ಕಾಳಜಿ ಬೆಳೆಸಲು ವಂತಿಗೆ ಸಂಗ್ರಹ ಮಾಡಲಾಗುತ್ತದೆ ಪಡುತ್ತಾರೆ ಎಂದು Trio World School ಶಾಲಾ ಆಡಳಿತ ಮಂಡಳಿಯವರು ಹೇಳುತ್ತಾರೆ.
ನಮ್ಮ ಶಾಲೆಯಲ್ಲಿ ಸುಮಾರು 35 ವಿವಿಧ ದೇಶಗಳಿಂದ ಬಂದಿರುವ ವಿದ್ಯಾರ್ಥಿಗಳಿದ್ದಾರೆ. ವ್ಯಾಲೆಂಟೈನ್ಸ್ ಡೇ ವಿದ್ಯಾರ್ಥಿಗಳನ್ನು ಒಗ್ಗೂಡಿಸಲು ಸಹಕಾರಿಯಾಗಿದೆ. ವಸ್ತು ಪ್ರದರ್ಶನ ಹಾಗೂ ಮಾರಾಟ, ವಂತಿಗೆಯಿಂದ ಸಂಗ್ರಹವಾದ ಹಣವನ್ನು ಸೀಡ್ಸ್ ಹೆಸರಿನ ಫೌಂಡೇಷನ್ ಗೆ ನೀಡಲಾಗುತ್ತದೆ. ಈ ಫೌಂಡೇಷನ್ ಮೂಲಕ ನಿರ್ಗತಿಕ ಮಕ್ಕಳ ವಿದ್ಯಾಭ್ಯಾಸಕ್ಕೆ ದಾರಿ ಮಾಡಿಕೊಡಲಾಗುತ್ತದೆ.
ಮುಕ್ತ ಸಮಾಜ ನಿರ್ಮಾಣ: ಪ್ರೇಮಿಗಳ ದಿನದಂದು ಶಾಲಾ ಮಕ್ಕಳು ಮುಕ್ತ ಮನಸ್ಸಿನಿಂದ ಪ್ರೀತಿಯನ್ನು ಹಂಚುಕೊಂಡಿದ್ದಾರೆ. ಚಾಕಲೋಟ್, ಹೂಗುಚ್ಛ, ಶುಭಾಶಯ ಪತ್ರಗಳು ಬಗೆ ಬಗೆ ಗಿಫ್ಟ್ ಗಳ ವಿನಿಮಯ ಜೋರಾಗಿ ನಡೆದಿದೆ.
ಮಕ್ಕಳು ಪ್ರೀತಿ ಪ್ರೇಮ ಎಂದು ಚಿಕ್ಕ ವಯಸ್ಸಿನಲ್ಲೇ ಮಾತಾಡಿ, ಹಬ್ಬ ಆಚರಿಸುತ್ತಿರುವುದು ಅವರ ಪೋಷಕರಿಗೂ ತಿಳಿದಿದೆ. ಬದಲಾಗಿರುವ ಕಾಲಕ್ಕೆ ತಕ್ಕಂತೆ ಮಕ್ಕಳ ಆದ್ಯತೆ ಹಾಗೂ ಅವಶ್ಯಕತೆಗೆ ಪೋಷಕರು ಸಾಥ್ ನೀಡುತ್ತಿದ್ದಾರೆ. ತ್ವರಿತ ಗತಿಯಲ್ಲಿ ಎಲ್ಲವನ್ನೂ ಕಲಿಯಬಲ್ಲ ಮಕ್ಕಳಿಗೆ ಪ್ರೀತಿ, ಪ್ರೇಮದ ವಿಷಯದಲ್ಲಿ ಯಾಕೆ ನಿರ್ಬಂಧ ವಿಧಿಸಬೇಕು, ಯಾವುದೂ ಸರಿ, ಯಾವುದೂ ತಪ್ಪು ಎಂಬ ನಿರ್ಣಯವನ್ನು ಚಿಕ್ಕಂದಿನಿಂದಲೇ ಕಲಿಯಬೇಕಾದ್ದು ಅವಶ್ಯ ಎಂದು ಪೋಷಕರು ಹೇಳುತ್ತಾರೆ. ಒಟ್ಟಿನಲ್ಲಿ ಬೆಂಗಳೂರು ಪ್ರಕಾಶಿಸುತ್ತಿದೆ. ಬಹಳ ಮುಂದುವರೆದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications