ಡಿಕೆಶಿಗೆ ಅವಮಾನ : ಎಚ್ಡಿಕೆ ವಿರುದ್ಧ ಅಭಿಮಾನಿಗಳ ಕಿಡಿ

ಫೆ.12ರಂದು ಅಭಿನಂದನಾ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ರವರು 'ಬಿಜೆಪಿಯೊಂದಿಗೆ ಡಿಕೆಶಿಯವರು ಒಳಒಪ್ಪಂದ ಮಾಡಿಕೊಂಡು ದಾರಿತಪ್ಪಿದ ಮಗನಾಗಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವೈಯಕ್ತಿಕವಾಗಿ ನಿಂದನೆ ಮಾಡಿದ್ದರು. ಆದರೆ ನಿಜವಾಗಿಯೂ ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಂಡಿರುವವರು ಕುಮಾರಸ್ವಾಮಿಯವರು ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮೈಸೂರು ಜಿ.ಪಂ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ ನೈತಿಕ ಬೆಂಬಲ ನೀಡಿದ್ದರೂ ಕೂಡ ಅಧಿಕಾರದ ಆಸೆಯಿಂದ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿರುವ ಇವರು ಡಿ.ಕೆ.ಶಿವಕುಮಾರ್ರವರ ವಿರುದ್ಧ ಇಲ್ಲದ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಎಚ್.ಡಿ.ಕುಮಾರಸ್ವಾಮಿ ಈ ಅವಹೇಳನಕಾರಿ ಮಾತನ್ನು ಹಿಂತೆಗೆದುಕೊಳ್ಳಬೇಕು. ಮತ್ತು ಕ್ಷಮೆ ಯಾಚಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ ಹಾಗೂ ಜಿಲ್ಲಾ ಯುವ ಕಾಂಗ್ರೆಸ್, ಎನ್ಎಸ್ಯುಐ ಘಟಕಗಳೂ ಕೂಡ ಭಾಗವಹಿಸಿದ್ದವು. ಪ್ರಮುಖರಾದ ಆರ್.ಪ್ರಸನ್ನಕುಮಾರ್, ಎನ್.ರಮೇಶ್, ದೇವೇಂದ್ರಪ್ಪ, ವಿಜಯಕುಮಾರ್, ಯೋಗೇಶ್, ಎಸ್.ಪಿ.ದಿನೇಶ್, ಸುಂದರೇಶ್, ರವಿಕುಮಾರ್, ಕೆ.ಲಕ್ಷ್ಮಣ್, ಮಧುಸೂಧನ್, ಈಶ್ವರ್, ಕಿರಣ್ಗೌಡ, ರಮೇಶ್ ಹೆಗ್ಡೆ, ಎಸ್.ಕೆ.ಅಶೋಕ್, ಪ್ರವೀಣ್ಪಟೇಲ್, ಆರ್.ರಂಗನಾಥ್, ಆರೀಫ್, ರಂಜಿತ್, ಚಿಕ್ಕಮರಡಿ ಗಣೇಶ್, ನರಸಿಂಹ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications