ಮಲೆ ಮಹದೇಶ್ವರಬೆಟ್ಟದಲ್ಲಿ ಅಗ್ನಿ: 50 ಅಂಗಡಿ ಭಸ್ಮ

ಭಾನುವಾರ ರಾತ್ರಿ ಇದ್ದಕ್ಕಿದ್ದಂತೆ ಅಂಗಡಿಯೊಂದರಲ್ಲಿ ಉಂಟಾದ ಶಾರ್ಟ್ ಸರ್ಕ್ಯುಟ್ನಿಂದ ಬೆಂಕಿ ಕಾಣಿಸಿಕೊಂಡಿತು ಎನ್ನಲಾಗಿದ್ದು, ಕ್ಷಣ ಮಾತ್ರದಲ್ಲಿ ಬೆಂಕಿಯ ಕೆನ್ನಾಲಗೆ ಇತರೆ ಅಂಗಡಿಗಳಿಗೂ ವ್ಯಾಪಿಸಿತು. ರಾತ್ರಿಯಾದ್ದರಿಂದ ಅಂಗಡಿಗಳಲ್ಲಿ ಜನಸಂದಣಿ ಇರಲಿಲ್ಲವಾದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.
ಬೇಸಿಗೆ ಸಮೀಪಿಸುತ್ತಿದ್ದಂತೆ ಬಯಲುಸೀಮೆ ಪ್ರದೇಶಗಳಲ್ಲಿ ಕಾಡಿನ ಬೆಂಕಿ ಹಾವಳಿಯೂ ಕಾಣಿಸಿಕೊಳ್ಳಲಾರಂಭಿಸಿದೆ. ಇಲ್ಲಿನ ಜನ ಹೆಚ್ಚು ಜಾಗ್ರತೆ ವಹಿಸಬೇಕಾಗಿದೆ. ಅದರಲ್ಲೂ ದೂರದ ಊರುಗಳಲ್ಲಿ ಅಗ್ನಿಶಾಮಕ ವ್ಯವಸ್ಥೆ ಇಲ್ಲದೆಡೆ ಅಗ್ನಿ ಪ್ರಮಾದಗಳು ತೀಕ್ಷ್ಣವಾಗುವ ಸಾಧ್ಯತೆಗಳಿರುತ್ತವೆ.
ಹೋಟೆಲ್, ಪಾತ್ರೆ, ಬಟ್ಟೆ, ಗೊಂಬೆ ಅಂಗಡಿಗಳು ಸೇರಿದಂತೆ ನಾನಾ ರೀತಿಯ ಅಂಗಡಿಗಳು ಸುಟ್ಟು ನಾಶವಾಗಿವೆ. ಅಂಗಡಿಗಳಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮೊದಲ ಅಂಗಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಬೆಂಕಿ ಇತರೆ ಅಂಗಡಿಗಳಿಗೂ ಹಬ್ಬಲು ಕಾರಣವಾಯಿತು ಎಂದು ಹೇಳಲಾಗಿದೆ. ಒಟ್ಟಾರೆ 8 ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ನಷ್ಟದ ಅಂದಾಜು 50 ಲಕ್ಷಕ್ಕು ಹೆಚ್ಚಿರಬಹುದು ಎಂದು ತಿಳಿದುಬಂದಿದೆ.
ಭಕ್ತಾದಿಗಳ ಸಹಕಾರ: ಬೆಂಕಿಯ ಜ್ವಾಲೆ ವ್ಯಾಪಿಸುತ್ತಿರುವುದನ್ನು ಕಂಡು ಹೌಹಾರಿದ ಭಕ್ತಾದಿಗಳೇ ಬೆಂಕಿ ನಂದಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿದ್ದಾರೆ. ಬೆಟ್ಟದಲ್ಲಿ ಅಗ್ನಿ ಶಾಮಕ ದಳ ಇಲ್ಲದ ಕಾರಣ ಅದು ದೂರದ ಹನೂರಿನಿಂದ ಬರಬೇಕಾಗಿತ್ತು. ಅವರು ಬರುವುದರೊಳಗೆ ಸಾಕಷ್ಟು ಹಾನಿ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿತು. ಮಹದೇಶ್ವರಬೆಟ್ಟ ಸಿಪಿಐ ಗಂಗಲಿಂಗಯ್ಯ, ಪಿಎಸ್ಐ ದೀಪಕ್ ಮತ್ತು ರೇವಣ್ಣಸಿದ್ದಯ್ಯ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಂಸದ, ಶಾಸಕರ ಭೇಟಿ: ಚಾಮರಾಜನಗರ ಸಂಸತ್ ಸದಸ್ಯ ಆರ್. ಧ್ರುವನಾರಾಯಣ್, ಹನೂರು ಶಾಸಕ ಆರ್. ನರೇಂದ್ರ ಸೋಮವಾರ ಬೆಳಗ್ಗೆ ಬೆಟ್ಟಕ್ಕೆ ಭೇಟಿ ನೀಡಿ ಬೆಂಕಿ ಅನಾಹುತವನ್ನು ಅವಲೋಕಿಸಿದರು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಷ್ಟಕ್ಕೊಳಗಾದ ಅಂಗಡಿ ಮಾಲಿಕರಿಗೆ ನಷ್ಟ ದೊರಕಿಸಿಕೊಡುವ ಭರವಸೆ ನೀಡಿದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications