ಮಲೆ ಮಹದೇಶ್ವರಬೆಟ್ಟದಲ್ಲಿ ಅಗ್ನಿ: 50 ಅಂಗಡಿ ಭಸ್ಮ

ಭಾನುವಾರ ರಾತ್ರಿ ಇದ್ದಕ್ಕಿದ್ದಂತೆ ಅಂಗಡಿಯೊಂದರಲ್ಲಿ ಉಂಟಾದ ಶಾರ್ಟ್ ಸರ್ಕ್ಯುಟ್ನಿಂದ ಬೆಂಕಿ ಕಾಣಿಸಿಕೊಂಡಿತು ಎನ್ನಲಾಗಿದ್ದು, ಕ್ಷಣ ಮಾತ್ರದಲ್ಲಿ ಬೆಂಕಿಯ ಕೆನ್ನಾಲಗೆ ಇತರೆ ಅಂಗಡಿಗಳಿಗೂ ವ್ಯಾಪಿಸಿತು. ರಾತ್ರಿಯಾದ್ದರಿಂದ ಅಂಗಡಿಗಳಲ್ಲಿ ಜನಸಂದಣಿ ಇರಲಿಲ್ಲವಾದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.
ಬೇಸಿಗೆ ಸಮೀಪಿಸುತ್ತಿದ್ದಂತೆ ಬಯಲುಸೀಮೆ ಪ್ರದೇಶಗಳಲ್ಲಿ ಕಾಡಿನ ಬೆಂಕಿ ಹಾವಳಿಯೂ ಕಾಣಿಸಿಕೊಳ್ಳಲಾರಂಭಿಸಿದೆ. ಇಲ್ಲಿನ ಜನ ಹೆಚ್ಚು ಜಾಗ್ರತೆ ವಹಿಸಬೇಕಾಗಿದೆ. ಅದರಲ್ಲೂ ದೂರದ ಊರುಗಳಲ್ಲಿ ಅಗ್ನಿಶಾಮಕ ವ್ಯವಸ್ಥೆ ಇಲ್ಲದೆಡೆ ಅಗ್ನಿ ಪ್ರಮಾದಗಳು ತೀಕ್ಷ್ಣವಾಗುವ ಸಾಧ್ಯತೆಗಳಿರುತ್ತವೆ.
ಹೋಟೆಲ್, ಪಾತ್ರೆ, ಬಟ್ಟೆ, ಗೊಂಬೆ ಅಂಗಡಿಗಳು ಸೇರಿದಂತೆ ನಾನಾ ರೀತಿಯ ಅಂಗಡಿಗಳು ಸುಟ್ಟು ನಾಶವಾಗಿವೆ. ಅಂಗಡಿಗಳಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮೊದಲ ಅಂಗಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಬೆಂಕಿ ಇತರೆ ಅಂಗಡಿಗಳಿಗೂ ಹಬ್ಬಲು ಕಾರಣವಾಯಿತು ಎಂದು ಹೇಳಲಾಗಿದೆ. ಒಟ್ಟಾರೆ 8 ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ನಷ್ಟದ ಅಂದಾಜು 50 ಲಕ್ಷಕ್ಕು ಹೆಚ್ಚಿರಬಹುದು ಎಂದು ತಿಳಿದುಬಂದಿದೆ.
ಭಕ್ತಾದಿಗಳ ಸಹಕಾರ: ಬೆಂಕಿಯ ಜ್ವಾಲೆ ವ್ಯಾಪಿಸುತ್ತಿರುವುದನ್ನು ಕಂಡು ಹೌಹಾರಿದ ಭಕ್ತಾದಿಗಳೇ ಬೆಂಕಿ ನಂದಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿದ್ದಾರೆ. ಬೆಟ್ಟದಲ್ಲಿ ಅಗ್ನಿ ಶಾಮಕ ದಳ ಇಲ್ಲದ ಕಾರಣ ಅದು ದೂರದ ಹನೂರಿನಿಂದ ಬರಬೇಕಾಗಿತ್ತು. ಅವರು ಬರುವುದರೊಳಗೆ ಸಾಕಷ್ಟು ಹಾನಿ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿತು. ಮಹದೇಶ್ವರಬೆಟ್ಟ ಸಿಪಿಐ ಗಂಗಲಿಂಗಯ್ಯ, ಪಿಎಸ್ಐ ದೀಪಕ್ ಮತ್ತು ರೇವಣ್ಣಸಿದ್ದಯ್ಯ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಂಸದ, ಶಾಸಕರ ಭೇಟಿ: ಚಾಮರಾಜನಗರ ಸಂಸತ್ ಸದಸ್ಯ ಆರ್. ಧ್ರುವನಾರಾಯಣ್, ಹನೂರು ಶಾಸಕ ಆರ್. ನರೇಂದ್ರ ಸೋಮವಾರ ಬೆಳಗ್ಗೆ ಬೆಟ್ಟಕ್ಕೆ ಭೇಟಿ ನೀಡಿ ಬೆಂಕಿ ಅನಾಹುತವನ್ನು ಅವಲೋಕಿಸಿದರು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಷ್ಟಕ್ಕೊಳಗಾದ ಅಂಗಡಿ ಮಾಲಿಕರಿಗೆ ನಷ್ಟ ದೊರಕಿಸಿಕೊಡುವ ಭರವಸೆ ನೀಡಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications