ಹಾರೋಹಳ್ಳಿ ಕಸಾಯಿಖಾನೆಗೆ ಸಿಂಧ್ಯಾ ವಿರೋಧ

ಬೆಂಗಳೂರಿನಿಂದ ಸುಮಾರು 39 ಕಿ.ಮೀ ದೂರದಲ್ಲಿರುವ ಈ ಪ್ರದೇಶದಲ್ಲಿ ಕಸಾಯಿಖಾನೆ ಸ್ಥಾಪನೆ ಕಾರ್ಯಕ್ಕೆ ಮುಂದಾಗಿರುವುದಕ್ಕೆ ಗ್ರಾಮಸ್ಥರು ಹಾಗೂ ಕೈಗಾರಿಕೋದ್ಯಮಿಗಳು ಆತಂಕಗೊಂಡಿದ್ದಾರೆ. ಹಾರೋಹಳ್ಳಿಯ ಮೊದಲ ಹಂತದ ಕೈಗಾರಿಕಾ ಪ್ರದೇಶ ಸುಮಾರು 4,000 ಎಕರೆಯಿದ್ದು, ಅನೇಕ ಕೈಗಾರಿಕೆಗಳು ಆರಂಭವಾಗಿದೆ. ಸ್ಥಳೀಯರಿಗೆ ಉದ್ಯೋಗವಕಾಶಗಳು ಲಭಿಸಿದ್ದು, ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಹಾಯಕವಾಗಿದೆ.
ಸುಮಾರು 20,000 ಜನ ಸಂಖ್ಯೆಯುಳ್ಳ ಹಾರೋಹಳ್ಳಿ ಗ್ರಾಮಸ್ಥರಲ್ಲದೆ, ಬೆಂಗಳೂರಿನಿಂದ ಕೆಲಸದ ನಿಮಿತ್ತ ಇಲ್ಲಿಗೆ ಪ್ರತಿನಿತ್ಯ ಬರುವ ಸುಮಾರು 3 ರಿಂದ 4 ಸಾವಿರ ನೌಕಕರು ಕೂಡಾ ಈ ಕಸಾಯಿಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಸಿಂಧ್ಯ ಹೇಳಿದ್ದಾರೆ.
ಕೋರ್ಟ್ ಆದೇಶ ಪಾಲನೆ: ಬಿ. ಕೃಷ್ಣಭಟ್ ಎಂಬುವರು ಹೈಕೋರ್ಟ್ ನಲ್ಲಿ ರಿಟ್ ಪಿಟಿಷನ್ ದಾಖಲಿಸಿ ಬೆಂಗಳೂರಿನಲ್ಲಿರುವ ಎಲ್ಲಾ ಕಸಾಯಿಖಾನೆಗಳನ್ನು ಬೆಂಗಳೂರಿನ ಹೊರವಲಯಕ್ಕೆ ಸ್ಥಳಾಂತರಿಸಲು ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ಕೋರ್ಟ್, ನಗರ ಹೊರವಲಯದಲ್ಲಿ ಸ್ಥಾಪನೆ ಮಾಡುವಂತೆ ಆದೇಶ ನೀಡಿತ್ತು. ಆದರೆ, ಹಾರೋಹಳ್ಳಿಯಲ್ಲಿ ಕೈಗಾರಿಕಾ ವಲಯದಲ್ಲಿ ಕಸಾಯಿಖಾನೆ ಸ್ಥಾಪನೆ ಮಾಡಲು ಹೊರಟಿರುವುದು ಸುತ್ತಮುತ್ತಲಿನ ರೈತರು, ಪರಿಸರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹಾಗಾಗಿ ಕೈಗಾರಿಕೆಗಳ ಒಳಿವಿಗಾಗಿ ಈ ಉದ್ದೇಶಿತ ಯೋಜನೆಯನ್ನು ಕೈಬಿಡಬೇಕೆಂದು ಸಿಂಧ್ಯ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications