ಕನ್ನಡ ನಾಡ ಭಾಷೆ ಮಣ್ಣಿನ ಭಾಷೆ ಮನಸಿನ ಭಾಷೆ

ಬಳ್ಳಾರಿಯಲ್ಲಿ ಫೆಬ್ರವರಿ 22ರ ಮಂಗಳವಾರ ಆಚರಿಸಲಾದ ಮಾತೃಭಾಷಾ' ದಿನಾಚರಣೆಯ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರ ರೆಡ್ಡಿ ಅವರು ರ್ಯಾಲಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ದಿನಾಚರಣೆ ಅಂಗವಾಗಿ ಬಚಪನ್ ಶಾಲೆ ರ್ಯಾಲಿಯನ್ನು ಏರ್ಪಡಿಸಿತ್ತು.
ಮತ್ತೆ ಐಟಿ ದಾಳಿ : ಬಳ್ಳಾರಿ ಜಿಲ್ಲೆಯ ಗಣಿ ಧಣಿಗಳ ನೆಮ್ಮದಿ ಮಣ್ಣುಪಾಲಾಗಿದೆ. ಐಟಿ ದಾಳಿ, ಸಿಬಿಐ ದಾಳಿ, ನೋಟೀಸ್ಗಳು, ಉತ್ತರಗಳು, ಲೋಕಾಯುಕ್ತರ ತನಿಖೆ ಹೀಗೇ ಹತ್ತಾರು ರೀತಿಯ ತನಿಖೆಗಳಿಗೆ ಜಿಲ್ಲೆಯ ಗಣಿ ಮತ್ತು ಗಣಿ ಉದ್ಯಮಕ್ಕೆ ಪೂರಕ ಚಟುವಟಿಕೆ ನಡೆಸುತ್ತಿದ್ದ ಉದ್ಯಮಿಗಳು ತೀವ್ರ ಇಕ್ಕಟ್ಟಿಗೆ ಗುರಿ ಆಗಿದ್ದಾರೆ.
ಮಂಗಳವಾರ ಬೆಳಗ್ಗೆ ಸುಮಾರು 7-8 ಗಂಟೆ ಸುಮಾರಿಗೆ ಐಟಿ ತಂಡ ಹೊಸಪೇಟೆಗೆ ಆಗಮಿಸಿ ಎಸ್ಎಂಎಸ್ಕೆ ಮಿನರಲ್ಸ್ ಅಂಡ್ ಲಾಜಸ್ಟಿಕ್ಸ್ನ ಮಾಲೀಕ ರಿಯಾಜ್ ಅವರ ಮನೆ, ಕಚೇರಿ ಸೇರಿ ನಾಲ್ಕು ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸಿದ್ದಾರೆ.
ಜಿಲ್ಲೆಯ 65 ಗಣಿ ಮಾಲೀಕರಿಗೆ ಸಿಬಿಐ ನೋಟೀಸ್ ಜಾರಿ ಮಾಡಿ ಖುದ್ದಾಗಿ ಹಾಜರಾಗಲು ತಿಳಿಸಿದೆ. ಅಲ್ಲದೇ, 1998ರಿಂದ ಈವರೆಗೆ ಆಯಾ ಕಂಪನಿಗಳು ನಡೆಸಿರುವ ರಪ್ತು ವಹಿವಾಟು, ಸ್ಥಳೀಯ ವಹಿವಾಟು, ಆಯಾ ಕಂಪನಿಗಳ ನಿರ್ದೇಶಕರ ಆಯವ್ಯಯ, ಕಂಪನಿಗಳ ಆಯವ್ಯಯ ಎಲ್ಲವನ್ನೂ ಕೂಡ ಕೇಳಿದೆ. ಈ ಹಿನ್ನೆಲೆಯಲ್ಲಿ ಅಕ್ರಮ - ಅನಧಿಕೃತ ಗಣಿಗಾರಿಕೆಯ ತನಿಖೆ ಜಿಲ್ಲೆಯ ಬಹುತೇಕ ಎಲ್ಲಾ ಗಣಿ ಉದ್ಯಮಿಗಳನ್ನು ತೀವ್ರವಾಗಿ ಕಾಡುತ್ತಿದೆ. ಅನೇಕರು ಆತಂಕಕ್ಕೆ ಈಡಾಗಿದ್ದಾರೆ ಎಂದೇ ವಿಶ್ಲೇಷಿಸಲಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications