ಮೈಸೂರಿನಲ್ಲಿ ಸಂಸದ ವಿಶ್ವನಾಥ್ ಕಚೇರಿಗೆ ಮುತ್ತಿಗೆ
ಮೈಸೂರು, ಫೆ. 26 : ಮೈಸೂರಿನ ಲೋಕನಾಯಕನಗರದಲ್ಲಿ ನೆಲೆಸಿರುವ ಕುಟುಂಬಗಳನ್ನು ಯಾವುದೇ ರೀತಿಯ ನೊಟೀಸ್ ನೀಡದೆ ಜಿಲ್ಲಾಡಳಿತ ತೆರವುಗೊಳಿಸಲಾಗುತ್ತಿದ್ದು ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಸಂಸದ ಎಚ್. ವಿಶ್ವನಾಥ್ ಅವರ ಕಚೇರಿಗೆ ಮುತ್ತಿಗೆ ಹಾಕಿದ ನಿವಾಸಿಗಳು ಬಳಿಕ ಮನವಿ ಸಲ್ಲಿಸಿದರು.
ಸುಮಾರು 40 ವರ್ಷದ ಹಿಂದೆ ವಿಶ್ವನಾಥ್ ಎಂಬುವರು ಸುಮಾರು 60 ನಿವೇಶನಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ ಹಲವರು ಮನೆಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಜಿಲ್ಲಾಡಳಿತ ಈ ಜಾಗ ಸರ್ಕಾರಕ್ಕೆ ಸೇರಿದೆ ಎಂಬ ಕಾರಣ ನೀಡಿ ಇಲ್ಲಿರುವ ಕೆಲವು ಮನೆಗಳನ್ನು ತೆರವುಗೊಳಿಸಿದೆ. ಇದರಿಂದ ಆ ಕುಟುಂಬಗಳು ಸೂರು ಕಳೆದುಕೊಂಡು ಬೀದಿಗೆ ಬಿದ್ದಿವೆ.
ಯಾವುದೇ ರೀತಿಯ ನೊಟೀಸ್ ನೀಡದೆ ಮನೆ ತೆರವುಗೊಳಿಸಲು ಮುಂದಾಗಿರುವ ಜಿಲ್ಲಾಡಳಿತದ ಕ್ರಮದಿಂದ ನಿವಾಸಿಗಳು ಆತಂಕಗೊಂಡಿದ್ದಾರಲ್ಲದೆ, ಸೂರು ಕಳೆದುಕೊಂಡು ಬೀದಿಗೆ ಬೀಳುವ ಪರಿಸ್ಥಿತಿ ಒದಗಿಬಂದಿರುವುದರಿಂದ ಭಯಭೀತರಾಗಿದ್ದಾರೆ. ಸದ್ಯಕ್ಕೆ ಯಾರಿಗೂ ಕಷ್ಟವನ್ನು ಹೇಳಿಕೊಳ್ಳಲಾಗದ ಪರಿಸ್ಥಿತಿ ಎದುರಾಗಿದೆ.
ಕ್ಷೇತ್ರದ ಶಾಸಕ ಶಂಕರಲಿಂಗೇಗೌಡರು ಅನರ್ಹಗೊಂಡಿದ್ದಾರೆ. ಉಸ್ತುವಾರಿ ಸಚಿವರಾದ ರಾಮದಾಸ್ರವರು ಕೈಗೆ ಸಿಗುತ್ತಿಲ್ಲ. ಜಿಲ್ಲಾಧಿಕಾರಿ ಹರ್ಷಗುಪ್ತಾರವರು ತಮ್ಮ ಮನವಿಯನ್ನು ಸ್ವೀಕರಿಸುತ್ತಿಲ್ಲ ಎಂದು ತಮ್ಮ ಅಳಲನ್ನು ನಿವಾಸಿಗಳು ವಿಶ್ವನಾಥ್ರವರ ಮುಂದೆ ತೋಡಿಕೊಂಡರು. ಇದೇ ಸಂದರ್ಭ ನೊಂದ ಕೆಲವರು ತಮ್ಮೊಂದಿಗೆ ತಂದಿದ್ದ ವಿಷವನ್ನು ಸೇವಿಸಿ ಆತ್ಮಹತ್ಯೆಗೂ ಮುಂದಾದರು. ಸಕಾಲದಲ್ಲಿ ಆಗಮಿಸಿದ ನಜರ್ಬಾದ್ ಠಾಣೆ ಪೊಲೀಸರು ಅದನ್ನು ವಿಫಲಗೊಳಿಸಿದರು. ಕೆಲವರು ವಿಶ್ವನಾಥ್ರವರ ಕಾಲಿಗೆ ಬಿದ್ದು ತಮ್ಮ ಮನೆಗಳನ್ನು ತೆರವುಗೊಳಿಸದಂತೆ ಬೇಡಿಕೊಳ್ಳುತ್ತಿದ್ದ ದೃಶ್ಯವೂ ಕಂಡು ಬಂತು.
ಮನವಿ ಸ್ವೀಕರಿಸಿದ ವಿಶ್ವನಾಥ್ರವರು ಸಂಬಂಧಿಸಿದವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರಲ್ಲದೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸದರಾದರೂ ಸಾಧ್ಯವಾಗಲಿಲ್ಲ.
ಆಕ್ರೋಶ : ಜಿಲ್ಲಾಧಿಕಾರಿ ಹರ್ಷಗುಪ್ತಾರವರು ಉದ್ದಟತನದಿಂದ ವರ್ತಿಸುತ್ತಿದ್ದು, ಬಡವರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಆರೋಪಿಸಿದರು. ನಾವು ನೀಡುವ ಮನವಿಯನ್ನು ಪರಿಶೀಲಿಸದೆ ಕಸದಬುಟ್ಟಿಗೆ ಹಾಕುತ್ತಾರೆ. ಇಂತಹ ಜಿಲ್ಲಾಧಿಕಾರಿಯನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications