ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್ ಮಾಡಿದ ಸಿಎಂ?

ಹೀಗೆ ಹಲವು ಬಾರಿ ಮುಂದೂಡಲ್ಪಟ್ಟ ಸಂಪುಟ ವಿಸ್ತರಣೆಗೆ ಹೈ ಕಮಾಂಡ್ ಕೂಡಾ ಗ್ರೀನ್ ಸಿಗ್ನಲ್ ನೀಡಿದೆ. ಶಿವರಾತ್ರಿ, ಮಾ. 11 ರಿಂದ 13 ರ ವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನ ಮುಗಿಸಿಕೊಂಡು ಸಚಿವರ ಪಟ್ಟಿಯತ್ತ ಸಿಎಂ ಹಾಗೂ ಪಕ್ಷದ ವರಿಷ್ಠರು ಕಣ್ಣು ಹಾಯಿಸಲಿದ್ದಾರೆ. ಪಕ್ಷದಿಂದ ಪಕ್ಷಕ್ಕೆ ಹಾರುವ ಸ್ವತಂತ್ರ ಜನಪ್ರತಿನಿಧಿ ವರ್ತೂರು ಪ್ರಕಾಶ್ ಸೇರಿದಂತೆ ಪಕ್ಷದ ಹಳೆ ಹುಲಿಗಳಿಗೆ ಈ ಬಾರಿ ಅವಕಾಶ ನೀಡಲು ಕರ್ನಾಟಕ ಬಿಜೆಪಿ ಸಿದ್ಧವಾಗಿದೆ.
ಸಚಿವರ ಆಯ್ಕೆ ವಿಷಯದಲ್ಲಿ ಯಡಿಯೂರಪ್ಪ ಅವರಿಗೆ ಕೊಂಚ ಇರಸು ಮುರುಸಾದರೂ ವಿಧಿವಿಲ್ಲದೆ ಬೇಕಾದವರು ಬೇಡದವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕಿದೆ. ವರ್ತೂರು ಪ್ರಕಾಶ್, ಅಪ್ಪಚ್ಚುರಂಜನ್, ರಾಜೂ ಗೌಡ, ಸಿ.ಟಿ.ರವಿ, ಸೊಗಡು ಶಿವಣ್ಣ, ಸೇರಿದಂತೆ ಒಟ್ಟು ಆರು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಕಚೇರಿಯಿಂದ ಹರಿದು ಬಂದ ಸದ್ಯದ ಸುದ್ದಿ. ಮುಂದಿನ ಬದಲಾವಣೆಗೆ ನಿರೀಕ್ಷಿಸಿ.












Click it and Unblock the Notifications