ವಾಸ್ತುದೋಷ ನಿವಾರಣೆಗೆ ವಿದ್ಯಾರ್ಥಿ ಬರ್ಬರ ಹತ್ಯೆ?

ಸೋಮವಾರ ಶಾಲೆಗೆ ಹೋಗಿದ್ದ ಬಸವರಾಜ್ ಕಾಣೆ ಆಗಿದ್ದ. ಸಂಜೆ ವೇಳೆಯಲ್ಲಿ ಆತನ ಶವ ಶಾಲೆಯ ಹಿಂಭಾಗದ ಹಾಳುಬಾವಿಯಲ್ಲಿ ಸಿಕ್ಕಿತ್ತು. ಶವವನ್ನು ಹೊರ ತೆಗೆದು ಮಂಗಳವಾರ ಶವ ಪರೀಕ್ಷೆಯನ್ನು ನಡೆಸಲಾಯಿತು. ಶವ ಪರೀಕ್ಷೆಯ ನಂತರ ಪೋಷಕರಿಗೆ ಶವವನ್ನು ಒಪ್ಪಿಸಿದ ನಂತರ, ಗ್ರಾಮಸ್ಥರು, ವಿವಿಧ ಸಂಘಟನೆಗಳವರು, ಹುಸೇನಪ್ಪನ ಸಂಬಂಧಿಕರು ಶವದ ಸಮೇತ ಗ್ರಾಮದಲ್ಲಿ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಿದರು. ಶಾಲೆಯ ವಿರುದ್ಧ ಆಕ್ರೋಶಗೊಂಡು ಶಾಲೆಯ ಪೀಠೋಪಕರಣಗಳನ್ನು, ಬಸ್ ಅನ್ನು ಜಖಂ ಮಾಡಿದ್ದಾರೆ.
ಆಗಿದ್ದೇನು? : ಕುಡತಿನಿ ಗ್ರಾಮದ ನೇತಾಜಿ ಖಾಸಗಿ ಶಾಲೆಗೆ ಹೊಸದಾಗಿ 2 ಕೋಣೆಗಳನ್ನು ನಿರ್ಮಾಣ ಮಾಡಲಾಗಿದೆ. ಈ ಕೋಣೆಗಳ ಮಧ್ಯೆ ಇರುವ ಖಾಲಿ ಜಾಗದ ಕಲ್ಲಿನ ಮೇಲೆ ರಕ್ತದ ಕಲೆಗಳು ಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ಕಟ್ಟಡದ ವಾಸ್ತುದೋಷ ನಿವಾರಣೆಯ ವಾಮಾಚಾರಕ್ಕಾಗಿ ಈ ಕೊಲೆ ನಡೆದಿದೆ ಎಂದು ಮೃತನ ಪೋಷಕರು, ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬುಡ್ಗ ಜನಾಂಗದ ಮುಖಂಡ ಸಣ್ಣ ಮಾರೆಪ್ಪ ಮಾತನಾಡಿ, ವಾಮಾಚಾರಕ್ಕಾಗಿ, ಅಲ್ಪಸಂಖ್ಯಾತರಾಗಿರುವ ಅಲೆಮಾರಿ ಜನಾಂಗದ ಬಸವರಾಜ್ನನ್ನೇ ಶಾಲೆಯ ಆಡಳಿತ ಮಂಡಲಿ ಆಯ್ಕೆ ಮಾಡಿಕೊಂಡಿದೆ. ಘಟನೆ ಕುರಿತು ಸಿಓಡಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಆರೋಪವನ್ನು ಸಾರಾಸಗಟಾಗಿ ಅಲ್ಲಗಳೆದಿರುವ, ಶಾಲೆಯ ಕಾರ್ಯದರ್ಶಿ ಬಸವರಾಜ್, ಕಟ್ಟಡಕ್ಕೆ ಯಾವುದೇ ವಾಸ್ತುದೋಷ ಇಲ್ಲ. ವಾಮಾಚಾರದಲ್ಲಿ ನಮಗೆ ನಂಬಿಕೆ ಇಲ್ಲ. ಈ ಘಟನೆ ನಡೆದದ್ದಕ್ಕೆ ನಮಗೂ ಆಘಾತ ಆಗಿದೆ, ವಿಷಾದವೂ ಇದೆ. ಘಟನೆ ಕುರಿತು ಯಾವುದೇ ತನಿಖೆ ನಡೆದರೂ ವಿಚಾರಣೆಗೆ ಒಳಪಡಲು ಸಿದ್ಧರಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಬಿಗಿ ಭದ್ರತೆ : ಬಸವರಾಜ್ನ ಅಸಹಜ ಸಾವಿನ ಹಿನ್ನೆಲೆಯಲ್ಲಿ ಕುಡತಿನಿ ಗ್ರಾಮದಲ್ಲಿ ಉಂಟಾದ ಉದ್ವಿಗ್ನ ಸ್ಥಿತಿಯನ್ನು ನಿಭಾಯಿಸಲು ಡಿಎಆರ್ನ 2 ತುಕುಡಿಗಳನ್ನು ಪೊಲೀಸರು ನಿಯೋಜಿಸಿದ್ದಾರೆ. ಅಲ್ಲದೇ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುರೇರ ಸ್ಥಳದಲ್ಲೇ ಗ್ರಾಮದಲ್ಲಿ ಇದ್ದುಕೊಂಡು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಡಾ; ಚಂದ್ರಗುಪ್ತಾ ಅವರು, ವಿದ್ಯಾರ್ಥಿಯ ಸಾವಿನ ಕುರಿತು ಶಾಲೆಯ ಆಡಳಿತ ಮಂಡಲಿ, ಶಿಕ್ಷಕರು, ಸಹಪಾಠಿಗಳು ಮತ್ತು ಇನ್ನಿತರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಶ್ವಾನದಳ ಆರೋಪಿಗಳ ಪತ್ತೆಗಾಗಿ ಶ್ರಮಿಸುತ್ತಿದೆ ಎಂದರು. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications