ವಾಸ್ತುದೋಷ ನಿವಾರಣೆಗೆ ವಿದ್ಯಾರ್ಥಿ ಬರ್ಬರ ಹತ್ಯೆ?

ಸೋಮವಾರ ಶಾಲೆಗೆ ಹೋಗಿದ್ದ ಬಸವರಾಜ್ ಕಾಣೆ ಆಗಿದ್ದ. ಸಂಜೆ ವೇಳೆಯಲ್ಲಿ ಆತನ ಶವ ಶಾಲೆಯ ಹಿಂಭಾಗದ ಹಾಳುಬಾವಿಯಲ್ಲಿ ಸಿಕ್ಕಿತ್ತು. ಶವವನ್ನು ಹೊರ ತೆಗೆದು ಮಂಗಳವಾರ ಶವ ಪರೀಕ್ಷೆಯನ್ನು ನಡೆಸಲಾಯಿತು. ಶವ ಪರೀಕ್ಷೆಯ ನಂತರ ಪೋಷಕರಿಗೆ ಶವವನ್ನು ಒಪ್ಪಿಸಿದ ನಂತರ, ಗ್ರಾಮಸ್ಥರು, ವಿವಿಧ ಸಂಘಟನೆಗಳವರು, ಹುಸೇನಪ್ಪನ ಸಂಬಂಧಿಕರು ಶವದ ಸಮೇತ ಗ್ರಾಮದಲ್ಲಿ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಿದರು. ಶಾಲೆಯ ವಿರುದ್ಧ ಆಕ್ರೋಶಗೊಂಡು ಶಾಲೆಯ ಪೀಠೋಪಕರಣಗಳನ್ನು, ಬಸ್ ಅನ್ನು ಜಖಂ ಮಾಡಿದ್ದಾರೆ.
ಆಗಿದ್ದೇನು? : ಕುಡತಿನಿ ಗ್ರಾಮದ ನೇತಾಜಿ ಖಾಸಗಿ ಶಾಲೆಗೆ ಹೊಸದಾಗಿ 2 ಕೋಣೆಗಳನ್ನು ನಿರ್ಮಾಣ ಮಾಡಲಾಗಿದೆ. ಈ ಕೋಣೆಗಳ ಮಧ್ಯೆ ಇರುವ ಖಾಲಿ ಜಾಗದ ಕಲ್ಲಿನ ಮೇಲೆ ರಕ್ತದ ಕಲೆಗಳು ಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ಕಟ್ಟಡದ ವಾಸ್ತುದೋಷ ನಿವಾರಣೆಯ ವಾಮಾಚಾರಕ್ಕಾಗಿ ಈ ಕೊಲೆ ನಡೆದಿದೆ ಎಂದು ಮೃತನ ಪೋಷಕರು, ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬುಡ್ಗ ಜನಾಂಗದ ಮುಖಂಡ ಸಣ್ಣ ಮಾರೆಪ್ಪ ಮಾತನಾಡಿ, ವಾಮಾಚಾರಕ್ಕಾಗಿ, ಅಲ್ಪಸಂಖ್ಯಾತರಾಗಿರುವ ಅಲೆಮಾರಿ ಜನಾಂಗದ ಬಸವರಾಜ್ನನ್ನೇ ಶಾಲೆಯ ಆಡಳಿತ ಮಂಡಲಿ ಆಯ್ಕೆ ಮಾಡಿಕೊಂಡಿದೆ. ಘಟನೆ ಕುರಿತು ಸಿಓಡಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಆರೋಪವನ್ನು ಸಾರಾಸಗಟಾಗಿ ಅಲ್ಲಗಳೆದಿರುವ, ಶಾಲೆಯ ಕಾರ್ಯದರ್ಶಿ ಬಸವರಾಜ್, ಕಟ್ಟಡಕ್ಕೆ ಯಾವುದೇ ವಾಸ್ತುದೋಷ ಇಲ್ಲ. ವಾಮಾಚಾರದಲ್ಲಿ ನಮಗೆ ನಂಬಿಕೆ ಇಲ್ಲ. ಈ ಘಟನೆ ನಡೆದದ್ದಕ್ಕೆ ನಮಗೂ ಆಘಾತ ಆಗಿದೆ, ವಿಷಾದವೂ ಇದೆ. ಘಟನೆ ಕುರಿತು ಯಾವುದೇ ತನಿಖೆ ನಡೆದರೂ ವಿಚಾರಣೆಗೆ ಒಳಪಡಲು ಸಿದ್ಧರಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಬಿಗಿ ಭದ್ರತೆ : ಬಸವರಾಜ್ನ ಅಸಹಜ ಸಾವಿನ ಹಿನ್ನೆಲೆಯಲ್ಲಿ ಕುಡತಿನಿ ಗ್ರಾಮದಲ್ಲಿ ಉಂಟಾದ ಉದ್ವಿಗ್ನ ಸ್ಥಿತಿಯನ್ನು ನಿಭಾಯಿಸಲು ಡಿಎಆರ್ನ 2 ತುಕುಡಿಗಳನ್ನು ಪೊಲೀಸರು ನಿಯೋಜಿಸಿದ್ದಾರೆ. ಅಲ್ಲದೇ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುರೇರ ಸ್ಥಳದಲ್ಲೇ ಗ್ರಾಮದಲ್ಲಿ ಇದ್ದುಕೊಂಡು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಡಾ; ಚಂದ್ರಗುಪ್ತಾ ಅವರು, ವಿದ್ಯಾರ್ಥಿಯ ಸಾವಿನ ಕುರಿತು ಶಾಲೆಯ ಆಡಳಿತ ಮಂಡಲಿ, ಶಿಕ್ಷಕರು, ಸಹಪಾಠಿಗಳು ಮತ್ತು ಇನ್ನಿತರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಶ್ವಾನದಳ ಆರೋಪಿಗಳ ಪತ್ತೆಗಾಗಿ ಶ್ರಮಿಸುತ್ತಿದೆ ಎಂದರು. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications