ಕೂಡ್ಲಿಗಿ ಬಳಿ ಭೀಕರ ಅಪಘಾತಕ್ಕೆ ಮೂವರ ಬಲಿ

ಮೃತರು ಆಟೊ ಚಾಲಕ ಅಮರದೇವರಗುಡ್ಡ ಗೊಲ್ಲರಹಟ್ಟಿಯ ಜಯಪ್ಪ(20), ಗಿಡ್ಡ ಚಿತ್ತಪ್ಪ(25), ನಾಗಜ್ಜ(68). ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಓಬಳೇಶ್, ಚಿತ್ತಪ್ಪ, ನಾಗಪ್ಪ, ಬಸವರಾಜ್, ಜಗದೀಶ್, ನಾಗಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications