Get Updates
Get notified of breaking news, exclusive insights, and must-see stories!

ಕೂಡ್ಲಿಗಿ ಬಳಿ ಭೀಕರ ಅಪಘಾತಕ್ಕೆ ಮೂವರ ಬಲಿ

Accident near Kudligi, Bellary
ಬಳ್ಳಾರಿ, ಮಾ. 5 : ಶುಕ್ರವಾರ ಸಂತೆಗೆ ಆಗಮಿಸುತ್ತಿದ್ದ ಆಟೋ ಮರಕ್ಕೆ ಡಿಕ್ಕಿ ಹೊಡೆದ ಕಾರಣ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟಿದ್ದು, 6 ಜನರು ತೀವ್ರವಾಗಿ ಗಾಯಗೊಂಡ ಘಟನೆ ಕೂಡ್ಲಿಗಿಯ ಕೆರೆ ಕಾವಲರಹಟ್ಟಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಮೃತರು ಆಟೊ ಚಾಲಕ ಅಮರದೇವರಗುಡ್ಡ ಗೊಲ್ಲರಹಟ್ಟಿಯ ಜಯಪ್ಪ(20), ಗಿಡ್ಡ ಚಿತ್ತಪ್ಪ(25), ನಾಗಜ್ಜ(68). ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ಓಬಳೇಶ್, ಚಿತ್ತಪ್ಪ, ನಾಗಪ್ಪ, ಬಸವರಾಜ್, ಜಗದೀಶ್, ನಾಗಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+