ಬಳ್ಳಾರಿ ಕಾಂಗ್ರೆಸ್ ಪಟ್ಟ :ದಿವಾಕರ್ ಗೆ ಕಷ್ಟ ಕಷ್ಟ

ಕೆ.ಸಿ. ಕೊಂಡಯ್ಯ, ಬಳ್ಳಾರಿ ಜಿಲ್ಲೆಯ ಬಹುತೇಕ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ನ ಸೋತ ಅಭ್ಯರ್ಥಿಗಳು, ಜಿಲ್ಲಾ ಪಂಚಾಯಿತಿಯ ಹಾಲಿ - ಮಾಜಿ ಸದಸ್ಯರು ಸೇರಿ ಅನೇಕರು ಎಂ.ಪಿ. ರವೀಂದ್ರ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸಲು ಸಾಮೂಹಿಕವಾಗಿ ಶ್ರಮಿಸಿದ್ದರು. ಎಂ. ದಿವಾಕರಬಾಬು ಅವರ ತೆಲುಗು ಪ್ರೀತಿ, ಸ್ವಜಾತಿ ಪ್ರೇಮ, ಕೆಳಹಂತದವರ ಜೊತೆ ಅಸಂಬದ್ಧವಾಗಿ ವ್ಯವಹರಿಸುವುದು ಸೇರಿ ನಾನಾ ಕಾರಣಗಳಿಂದ ಪಕ್ಷದಿಂದ ದೂರ ಸರಿದಿದ್ದವರು ಎಂ.ಪಿ. ರವೀಂದ್ರ ನೇತೃತ್ವದಲ್ಲಿ ಕಾಂಗ್ರೆಸ್ಗೆ ಮರಳಿ ಜಿಲ್ಲೆಯಲ್ಲಿ ಬಿಜೆಪಿಗೆ ಪ್ರಬಲ ಎದುರಾಳಿ ಆಗಲಿದೆ ಎಂದು ಕಾರ್ಯಕರ್ತರು ಲೆಕ್ಕ ಹಾಕುತ್ತಿದ್ದಾರೆ. ಹರ್ಷ ವ್ಯಕ್ತಪಡಿಸಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿಸುವ ನಿಟ್ಟಿನಲ್ಲಿ ವಿವಿಧ ಪಕ್ಷ, ಸಂಘಟನೆಗಳವರು ಎಲ್ಲರೂ ಒಂದಾಗಿ ಬಿಜೆಪಿಗೆ ಬೆಂಬಲ ನೀಡಿದ್ದರು. ವೀರಶೈವರು ಜಿಲ್ಲೆಯಲ್ಲಿ ಕ್ರಮೇಣ ಬಿಜೆಪಿಯಿಂದ ದೂರಕ್ಕೆ ಸರಿಯುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಎಂ.ಪಿ. ರವೀಂದ್ರ ಅವರಿಗೆ ಮಣೆ ಹಾಕಿ ಪಕ್ಷದ ಅಧ್ಯಕ್ಷಗಾದಿಯನ್ನು ನೀಡಿರುವುದು ಸಮಾಜಕ್ಕೆ ಆಶಾದಾಯಕ ಬೆಳವಣಿಗೆ ಎಂದು ವೀರಶೈವ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಧಿಕಾರ ವಂಚಿತ ವರ್ಗ: ಅಲ್ಲದೇ, ಜಿಲ್ಲೆಯ ಹೊಸಪೇಟೆ ಮತ್ತು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಮಾತ್ರವೇ ಸಾಮಾನ್ಯ ವರ್ಗಕ್ಕೆ ಇದ್ದು ಉಳಿದ ಐದು ವಿಧಾನಸಭಾ, ಲೋಕಸಭಾ ಕ್ಷೇತ್ರ ಮೀಸಲು ಕ್ಷೇತ್ರಗಳು. ಈ ನಿಟ್ಟಿನಲ್ಲಿ ವೀರಶೈವರು, ಕುರುಬರು ಸೇರಿ ಇತರೆ ಜನಾಂಗದವರು ರಾಜಕೀಯ ಅಧಿಕಾರ ವಂಚಿತರೇ.
ಎಂ.ಪಿ. ರವೀಂದ್ರ ಅವರು ಜಾತ್ಯತೀತವಾಗಿ ಪಕ್ಷವನ್ನು ಸಂಘಟಿಸಿದಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಸ್ಪಷ್ಟ ಸಾಧ್ಯತೆಗಳಿವೆ. ಜಿಲ್ಲಾ - ತಾಲೂಕು ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಎಂ.ಪಿ. ರವೀಂದ್ರ ಅವರು 'ಪಶ್ಚಿಮ ತಾಲೂಕುಗಳ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ" ಎಂದು ಹೇಳಿ ಕಾಂಗ್ರೆಸ್ ಗೆಲುವಿಗೆ ಯಶಸ್ವೀ ತಂತ್ರಗಳನ್ನು ರೂಪಿಸಿದ್ದಾರೆ.
ಎಂ.ಪಿ. ರವೀಂದ್ರರ ನೇಮಕಾತಿ ಹಿನ್ನಲೆಯಲ್ಲಿ ಬಿಜೆಪಿ - ಜೆಡಿಎಸ್ನಲ್ಲಿಯ 'ಆಶಾಜೀವಿ"ಗಳು ಕಾಂಗ್ರೆಸ್ನತ್ತ ಲಗ್ಗೆ ಹಾಕಲಿದ್ದಾರೆ. ಈ ಪಕ್ಷಾಂತರ ಪರ್ವ ಕಾಂಗ್ರೆಸ್ಗೆ ಅದೆಷ್ಟು ಲಾಭ ತರಲಿದೆ, ಪಕ್ಷಾಂತರ ಯಾವ ಸಂದರ್ಭ ನಡೆಯಲಿದೆ ಎನ್ನುವುದು ಅನೇಕರ ಯಕ್ಷ ಪ್ರಶ್ನೆ. ಈ ನಿಟ್ಟಿನಲ್ಲಿ ಜೆಡಿಎಸ್ - ಬಿಜೆಪಿಯಲ್ಲಿ ವಿವಿಧ ರೀತಿಯ ಲೆಕ್ಕಾಚಾರ ಪ್ರಾರಂಭ ಆಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications