ಕೂಡ್ಲಿಗಿ ಬೆಂಕಿ ಆಕಸ್ಮಿಕ : ಭಾರೀ ಆಸ್ತಿಪಾಸ್ತಿ ನಷ್ಟ

ಸೋಮವಾರ ಮಧ್ಯಾಹ್ನ ಏಕಾಏಕಿ ಅಗ್ನಿ ಆಕಸ್ಮಿಕ ಕಾಣಿಸಿಕೊಂಡಿದ್ದು 40 ಗುಡಿಸಲುಗಳು, 4 ಮನೆಗಳು, 5 ಕರುಗಳು, 3 ಎತ್ತುಗಳು, 109 ಬಣವೆಗಳು, 3 ಬಂಡಿಗಳು, 8 ಲಕ್ಷ ರುಪಾಯಿ ಮೌಲ್ಯದ ಆಹಾರಧಾನ್ಯಗಳು, ಬಟ್ಟೆಗಳು ಬೆಂಕಿಗೆ ಆಹುತಿ ಆಗಿವೆ. ನಿರಾಶ್ರಿತರಾಗಿರುವ 200ಕ್ಕೂ ಹೆಚ್ಚಿನ ಜನರಿಗೆ ಸ್ಥಳೀಯ ಶಾಲೆಯಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.
ಕೂಡ್ಲಿಗಿ, ಕೊಟ್ಟೂರು, ಹರಪನಹಳ್ಳಿ, ಸಂಡೂರು ಹಾಗೂ ಹಗರಿಬೊಮ್ಮನಹಳ್ಳಿಗಳಿಂದ ಅಗ್ನಿಶಾಮಕ ವಾಹನಗಳು ಬಂದು ಬೆಂಕಿ ನಂದಿಸುವಲ್ಲಿ ಶ್ರಮಿಸಿದವು. ಆದರೆ, ಗಾಳಿಯು ವೇಗವಾಗಿ ಬೀಸುತ್ತಿದ್ದ ಕಾರಣ ಬೆಂಕಿ ವ್ಯಾಪಕವಾಗಿ ಹಬ್ಬಿ ನಷ್ಟದ ಪ್ರಮಾಣ ಹೆಚ್ಚಾಗಿದೆ. ಜನರ ಸಾವು - ನೋವು ಸಂಭವಿಸಿಲ್ಲ ಎಂದು ತಹಸೀಲ್ದಾರ್ ವೀರಮಲ್ಲಪ್ಪ ಪೂಜಾರ್ ತಿಳಿಸಿದ್ದಾರೆ.
ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ ಕನ್ನಡತೇರು' ಕಾರ್ಯಕ್ರಮಕ್ಕೆ ತಯಾರಾಗುತ್ತಿದ್ದ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡರು. ಬಳ್ಳಾರಿ ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್ ಅವರು ಸೋಮವಾರ ಸಂಜೆ ವೇಳೆಗೆ ಭೇಟಿ ನೀಡಿ, ನಿರಾಶ್ರಿತರಿಗೆ ತತ್ಕ್ಷಣದ ಪರಿಹಾರ, ಆಶ್ರಯ, ಆಹಾರ, ರಾತ್ರಿಯ ವಸತಿ, ಆರೋಗ್ಯ ಕುರಿತು ಸೂಕ್ತ ಅಗತ್ಯ ಕ್ರಮಗಳನ್ನು ಕೈಗೊಂಡರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications