ಮೈಸೂರಿನಲ್ಲಿ ವೇಶ್ಯಾವಾಟಿಕೆ: ನಾಲ್ವರ ಬಂಧನ

ಶಾಂತಮ್ಮ ಎಂಬ ನಲವತ್ತೆಂಟು ವರ್ಷದ ಹೆಂಗಸೇ ಈ ದಂಧೆಯ ರೂವಾರಿಯಾಗಿದ್ದು, ಆಗಾಗ್ಗೆ ಏರಿಯಾ ಬದಲಾಯಿಸುತ್ತಾ ಮನೆಗಳನ್ನು ಬಾಡಿಗೆ ಪಡೆದು ಅಲ್ಲಿ ವೇಶ್ಯಾವಾಟಿಕೆಯನ್ನು ನಡೆಸುತ್ತಿದ್ದಳು ಎನ್ನಲಾಗಿದೆ. ಇಪ್ಪತ್ತು ದಿನಗಳ ಹಿಂದೆ ದಟ್ಟಗಳ್ಳಿಯ 3ನೇ ಹಂತದ ಕನಕದಾಸನಗರದ ನಂ.17ರ ಮನೆಯ ಮಾಲೀಕ ಶ್ರೀನಿವಾಸಯ್ಯರವರಿಂದ ಮನೆ ಬಾಡಿಗೆ ಪಡೆದು ಒಬ್ಬಳೇ ವಾಸಿಸುತ್ತಿದ್ದಳು.
ಬಲೆ ಬೀಸಿದ ಪೊಲೀಸರು:ಆದರೆ ಆಕೆಯ ಮನೆಗೆ ಹೊತ್ತಲ್ಲದ ಹೊತ್ತಿನಲ್ಲಿ ಕಾರಿನಲ್ಲಿ ಬೈಕ್ನಲ್ಲಿ ಗಂಡಸರು, ಹುಡುಗರು ಬಂದ ಸ್ವಲ್ಪ ಸಮಯದಲ್ಲಿಯೇ ಹುಡುಗಿಯರು ಆಟೋದಲ್ಲಿ ಬಂದಿಳಿಯುತ್ತಿದ್ದರು. ಇದರಿಂದ ಶಾಂತಮ್ಮನ ಬಗ್ಗೆ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಮಾನ ಬಂದಿದ್ದರಿಂದ ಕುವೆಂಪುನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಠಾಣೆಯ ಇನ್ಸ್ಪೆಕ್ಟರ್ ಧನಂಜಯ ಹಾಗೂ ತಂಡ ಗಿರಾಕಿಗಳ ಸೋಗಿನಲ್ಲಿ ಹೋಗಿ ಶಾಂತಮ್ಮನ ಮನೆಯ ಬಾಗಿಲು ತಟ್ಟಿದ್ದಾರೆ. ಗಿರಾಕಿಗಳು ಮನೆಗೆ ಬಂದ ಸಂತೋಷದಲ್ಲಿ ವ್ಯವಹಾರ ಕುದುರಿಸಿ ಬಳಿಕ ತೊಣಚಿಕೊಪ್ಪಲು ಬಡಾವಣೆಯ ಗೀತಾ(27), ಆಕೆಯ ಸಂಬಂಧಿ ವಾಣಿ (19) ಹಾಗೂ ಕುವೆಂಪುನಗರದ ಕಾವ್ಯ(20) ಎಂಬಾಕೆಯನ್ನು ಶಾಂತಮ್ಮ ಕರೆಸಿದ್ದಾಳೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಅವರನ್ನು ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ವಿಚಾರಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಶಾಂತಮ್ಮ ಅದೆಂತಹ ಬುದ್ದಿವಂತಳಾಗಿದ್ದಳೆಂದರೆ ಯಾವುದೇ ಹುಡುಗಿಯನ್ನು ಮನೆಯಲ್ಲಿಟ್ಟುಕೊಳ್ಳದೆ ಮನೆಗೆ ಬಂದ ಗಿರಾಕಿಯೊಂದಿಗೆ ವ್ಯವಹಾರ ಕುದುರಿಸಿ ನಂತರವಷ್ಟೆ ಹುಡುಗಿಯರನ್ನು ಕರೆಸುತ್ತಿದ್ದಳು ಎಂದು ಹೇಳಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications