ಮೈಸೂರು ವಿವಿ ಲೈಂಗಿಕ ಕಿರುಕುಳ, ದೂರಿದ್ದಕ್ಕೆ ಬೆದರಿಕೆ

ಆತ್ಮಹತ್ಯೆಗೆ ಯತ್ನಿಸಿದ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಸರಿತಾ ಮಾ.1ರಂದು ಪ್ರೊ.ಶಿವಬಸವಯ್ಯ ವಿರುದ್ಧ ಕುಲಪತಿ ವಿಜಿ ತಳವಾರ್ ಅವರಿಗೆ ದೂರು ನೀಡಿದ್ದರು. ಮಾ.3ರಂದು ಪ್ರೊ.ಶಿವಬಸವಯ್ಯರನ್ನು ವಿಚಾರಣೆ ನಡೆಸಿ ವಿದ್ಯಾರ್ಥಿನಿ ಮಾಡಿರುವ ಆರೋಪವನ್ನು ಕುಲ ಸಚಿವರು ತಳ್ಳಿಹಾಕಿದ್ದರು. ಬದಲಿಗೆ ಸರಿತಾರ ನಡವಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಅವಮಾನಿಸಿದ್ದರು. ನಂತರ, ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಸರಿತಾರ ಪತಿ ಮೈಸೂರು ವಿವಿ ವಿರುದ್ಧವೇ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.
ಪ್ರಾಣಿಶಾಸ್ತ್ರದ ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರೊ. ಶಿವಬಸವಯ್ಯ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರೆಸಿರುವ ವಿದ್ಯಾರ್ಥಿನಿ ಸರಿತಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಕೆಯನ್ನು ಬಿಎಂ ಆಸ್ಪತ್ರೆಗೆ ಸೇರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಉಪಚರಿಸಲಾಗುತ್ತಿದೆ. ಆಕೆಯಿಂದ ಹೇಳಿಕೆ ಇನ್ನೂ ಪಡೆಯಲಾಗಿಲ್ಲ ಎಂದು ವಿಜಯನಗರ ಪೊಲೀಸ್ ಠಾಣಾಧಿಕಾರಿ ಹೇಳಿದ್ದಾರೆ.
ಈ ನಡುವೆ ಮಾ.5ರಂದು ಪ್ರೊ.ಶಿವಬಸವಯ್ಯ ಅವರಿಗೆ ನೋಟಿಸ್ ಜಾರಿ ಮಾಡಿ ಲಿಖಿತ ರೂಪದಲ್ಲಿ ವಿವರಣೆ ಕೇಳಲಾಗಿದೆ. ಸರಿತಾ ಸಂಶೋಧನೆಯನ್ನು ಮುಂದುವರೆಸಬಹುದಾಗಿದ್ದು, ಬೇರೆ ಮಾರ್ಗದರ್ಶಕರನ್ನು ಆಯ್ಕೆ ಮಾಡಿಕೊಳ್ಳಬಹುದು. ಸಂಶೋಧನಾ ವಿದ್ಯಾರ್ಥಿಗಳಿಗೆ ಮೈಸೂರು ವಿವಿಯಿಂದ ನೀಡಲಾಗುವ 60 ಸಾವಿರ ರೂ.ಗಳ ವಿದ್ಯಾರ್ಥಿ ವೇತನವನ್ನು ಯಾರಿಗೆ ನೀಡಬೇಕು ಎಂಬುವುದು ಮಾರ್ಗದರ್ಶಕರು ನಿರ್ಧರಿಸಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications