ವಿಶ್ವಕಪ್ 2011 ಮೇಲೆ ಲಷ್ಕರ್ ಉಗ್ರರ ಕಾರ್ಮೋಡ
ಬೆಂಗಳೂರು, ಮಾ.8: ಭಾರತ ಸೇರಿದಂತೆ ಉಪಖಂಡದಲ್ಲಿ ನಡೆದಿರುವ ವಿಶ್ವಕಪ್ 2011 ಟೂರ್ನಿಮೆಂಟ್ ಮೇಲೆ ಪಾಕಿಸ್ತಾನದ ಲಷ್ಕರ್ ಇ ತೋಯ್ಬಾ ಉಗ್ರರ ಕರಿ ನೆರಳು ಬಿದ್ದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಪ್ರಮುಖ ಸ್ಟೇಡಿಯಂಗೆ ಬಿಗಿ ಭದ್ರತೆ ಒದಗಿಸಲು ಕೇಂದ್ರ ಗುಪ್ತಚರ ಇಲಾಖೆ ಸೂಚಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರಗಳಿಗೆ ಮಾಹಿತಿ ಒದಗಿಸಲಾಗಿದೆ. ಸಂಭಾವ್ಯ ಉಗ್ರರ ದಾಳಿ ಭೀತಿಯನ್ನು ಮನಗಂಡ ಬಿಸಿಸಿಐ ವಿಶ್ವಕಪ್ ಟೂರ್ನಿಮೆಂಟ್ ಮೇಲೆ ಸುಮಾರು 246 ಕೋಟಿ ರು ಗಳ ವಿಮೆ ಮಾಡಿಸಿದೆ.
ಕೆಎಸ್ ಸಿಎ ಸ್ಟೇಡಿಯಂ ಅಲ್ಲದೆ, ಅಹಮದಾಬಾದ್, ಚೆನ್ನೈ, ದೆಹಲಿ, ಮುಂಬೈ, ಹೈದರಾಬಾದ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಕ್ರಿಕೆಟ್ ಮೈದಾನಗಳನ್ನು ಕೆಮಿಕಲ್ ಬಾಂಬ್ ಗಳ ಮೂಲಕ ಚಿಂದಿ ಮಾಡಲು ಉಗ್ರರು ಸ್ಕೆಚ್ ಹಾಕಿದ್ದಾರೆ ಎಂದು ಮಾಹಿತಿಯಲ್ಲಿ ಸೂಚಿಸಲಾಗಿದೆ. ಉಗ್ರರು 2010ರ ಅಕ್ಟೋಬರ್ ನಲ್ಲೇ ರಹಸ್ಯವಾಗಿ ಈ ಬಗ್ಗೆ ಸಭೆ ನಡೆಸಿದ್ದಾರೆ. ಪ್ರಮುಖ ಕ್ರೀಡಾಂಗಣಗಳ ನೀಲನಕ್ಷೆ, ರೇಖಾಚಿತ್ರಗಳನ್ನು ಸಂಗ್ರಹಿಸಿ ಸಂಚು ರೂಪಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಲಷ್ಕರ್ ಇ ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಸೇನಾನಿ ಜಿಯಾವುದ್ದೀನ್ ಎನ್ನುವವನ್ನು ಬಂಧಿಸಿರುವ ದೆಹಲಿ ಪೊಲೀಸರಿಗೆ ಇತ್ತೀಚಿಗೆ ಸಿಕ್ಕ ಮಾಹಿತಿಯ ಆಧಾರದ ಮೇಲೆ ಗುಪ್ತಚರ ಇಲಾಖೆ ಈ ಸೂಚನೆ ನೀಡಿದೆ. ವಿಶ್ವಕಪ್ ಸಂದರ್ಭದಲ್ಲಿ ದಾಳಿಯ ಸಂಚು ರೂಪಿಸುತ್ತಿರುವುದು ದೆಹಲಿ ಪೊಲೀಸರ ತನಿಖೆ ವೇಳೆಯಲ್ಲಿ ಬಯಲಾಗಿದೆ. ಉಗ್ರರ ಹಿಟ್ ಲಿಸ್ಟ್ ನಲ್ಲಿ ಬೆಂಗಳೂರು ಅಗ್ರಪಂಕ್ತಿಯಲ್ಲಿರುವುದು ಆತಂಕಕಾರಿ ವಿಷಯವಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications