ಚಿತ್ರದುರ್ಗದಲ್ಲಿ ವೀರಸೌಧಕ್ಕೆ 23 ಲಕ್ಷ ರು. ಬಿಡುಗಡೆ

ಚಿತ್ರದುರ್ಗ ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘವು ಚಿತ್ರದುರ್ಗದಲ್ಲಿ ವೀರಸೌಧ ಹಾಗೂ ಗಾಂಧಿ ಭವನ ನಿರ್ಮಾಣಕ್ಕೆ ದಶಕಗಳಿಂದ ಹೋರಾಟ ನಡೆಸುತ್ತಾ ಬಂದಿತ್ತು. ಅದರಂತೆ ಸರ್ಕಾರದಿಂದ ಫೆಬ್ರವರಿ 28, 2000ರಲ್ಲಿ 53 ಲಕ್ಷ ರು.ಗಳಿಗೆ ಆಡಳಿತಾತ್ಮಕ ಮಂಜೂರಾತಿ ದೊರೆತು 30 ಲಕ್ಷ ರು. ಬಿಡುಗಡೆ ಮಾಡಲಾಗಿತ್ತು. ನಂತರ ಉಳಿದ 23 ಲಕ್ಷ ರು. ಹಣದ ಬಿಡುಗಡೆಗಾಗಿ ಚಿತ್ರದುರ್ಗ ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಸದಸ್ಯರು ಹಲವಾರು ವರ್ಷಗಳಿಂದ ಅನೇಕ ಬಾರಿ ಪ್ರಯತ್ನಿಸಿದರೂ ಕಾರಣಾಂತರದಿಂದ ಹಣ ಬಿಡುಗಡೆಯಾಗಿರಲಿಲ್ಲ.
ಈ ಬಿಡುಗಡೆಯಾಗಿರುವ ಹಣವನ್ನು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತರಲು ನಡೆಸಿದ ಜಿಲ್ಲಾ ಹೋರಾಟದ ಹಿನ್ನೆಲೆಯಲ್ಲಿ ಮತ್ತು ಇಂದಿನ ಯುವ ಪೀಳಿಗೆಗೆ ನಮ್ಮ ಸ್ವಾತಂತ್ರ್ಯದ ಮಹತ್ವದ ಅರಿವು ಮೂಡಿಸಲು ವೀರಸೌಧ ಹಾಗೂ ಗಾಂಧಿ ಭವನ ಕಾಮಗಾರಿಗೆ ಬಳಸಲು ಸ್ವಾತಂತ್ರ್ಯ ಹೋರಾಟಗಾರರ ಸಂಘ ನಿರ್ಧರಿಸಿದೆ.
ಸ್ವಾತಂತ್ರ್ಯ ಹೋರಾಟಗಾರರ ಸಂಘದ ಸದಸ್ಯರು ಇತ್ತೀಚಿಗೆ ಲೋಕಸಭಾ ಸದಸ್ಯರಾದ ಜನಾರ್ಧನ ಸ್ವಾಮಿರವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದರು. ಸ್ವಾತಂತ್ರ್ಯ ಹೋರಾಟಗಾರರ ಮನವಿಯನ್ನು ಸ್ವೀಕರಿಸಿ, ಹಲವಾರು ವರ್ಷಗಳಿಂದ ತಡೆ ಹಿಡಿದಿರುವ ಹಣವನ್ನು ಬಿಡುಗಡೆಮಾಡಲು ಸರ್ಕಾರವನ್ನು ಕೋರಲಾಗಿತ್ತು. ಕೋರಿಕೆಯಂತೆ ಸರ್ಕಾರ ತಕ್ಷಣ ಜಾರಿಗೆ ಬರುವಂತೆ 23 ಲಕ್ಷ ರು.ಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಬಿಡುಗಡೆ ಮಾಡಿದೆ, ಎಂದು ಸಂಸದರಾದ ಜನಾರ್ಧನ ಸ್ವಾಮಿಯವರು ತಿಳಿಸಿದ್ದಾರೆ.
ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ನಿನ್ನೆ ಸಂಸದ ಜನಾರ್ಧನ ಸ್ವಾಮಿಯವರನ್ನು ಚಿತ್ರದುರ್ಗದಲ್ಲಿ ಭೇಟಿ ಮಾಡಿ ತಮ್ಮ ಬಹು ದಿನದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿ ಅವರಿಗೂ ಮತ್ತು ಮುಖ್ಯಮಂತ್ರಿಗಳಾದ ಯಡಿಯೂರಪ್ಪರವರಿಗೂ ತಮ್ಮ ಧನ್ಯವಾದಗಳನ್ನು ತಿಳಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications