ಹೆಚ್ಚು ಟಿಕೆಟ್ ಮಾರಲು ಕೆಎಸ್ ಸಿಎಗೆ ಪೊಲೀಸ್ 'ಬುದ್ಧಿ'ಮಾತು

ಗಮನಾರ್ಹವೆಂದರೆ, ಇತ್ತೀಚೆಗೆ ದಿಲ್ಲಿಯ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂನಲ್ಲೂ ಹೀಗೆ ಆಯಿತು. ಆಗ ದಿಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸಿ, 10,000 ಕ್ಕಿಂತ ಹೆಚ್ಚು ಪಾಸುಗಳನ್ನು ವಿತರಿಸಬೇಡಿ. ಉಳಿದ ಅಷ್ಟನ್ನೂ ಸಾರ್ವಜನಿಕ ಮಾರಾಟಕ್ಕೆ ಬಿಡಿ ಎಂಬ ಸಾರ್ವತ್ರಿಕ ತೀರ್ಪು ನೀಡಿತು.
ಈ ಹಿನ್ನೆಲೆಯಲ್ಲಿ ಸರಕಾರಕ್ಕೆ ಪ್ರಸ್ತಾವನೆಯೊಂದನ್ನು ಕಳಿಸಿರುವ ಬಿದರಿ ಸಾಹೇಬರು, ಕೌಂಟರ್ ಗಳಲ್ಲಿ ಟೆಕೆಟ್ ಮಾರುವ ಮುನ್ನ ಅದರ ಲೆಕ್ಕಾಚಾರದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ. ಕನಿಷ್ಠ 18,000 ಟಿಕೆಟ್ ಗಳನ್ನಾದ್ರೂ ಮಾರಿ ಸ್ವಾಮಿ ಎಂದು ಅವರು ಭಿನ್ನವಿಸಿಕೊಂಡಿದ್ದಾರೆ. ಈಗ ನಾನು ಕಳಿಸಿರುವ ಪ್ರಸ್ತಾವನೆಯನ್ನು ಸರಕಾರ ಅನುಮೋದಿಸಲಿ ಬಳಿಕ ಕೆಎಸ್ ಸಿಎ ಜತೆ ಕೂತು ಮಾತನಾಡುವ ಎಂದೂ ಹೇಳೀದ್ದಾರೆ. ಒಂದೆರಡು ದಿನದಲ್ಲಿ ರಾಜ್ಯ ಸರಕಾರ ಪೊಲೀಸ್ ಆಯುಕ್ತರ ಪ್ರಸ್ತಾವನೆಗೆ ಅಂಕಿತ ಹಾಕುವ ಭರವಸೆ ಇದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಭಾರತ ಭಾಗಿಯಾಗಿದ್ದ ಎರಡು ವಿಶ್ವ ಕಪ್ ಪಂದ್ಯಗಳ ವೇಳೆ ಅಮಾಯಕ ಕ್ರಿಕೆಟ್ ಅಭಿಮಾನಿಗಳ ಮೇಲೆ ಅನಿವಾರ್ಯವಾಗಿ ಲಾಠಿ ಚಾರ್ಜ್ ಮಾಡಿರುವುದಕ್ಕೆ ಶ್ಯಾನೆ ಬೇಜಾರು ಮಾಡಿಕೊಂಡಿರುವ ಬಿದರಿ ಅವರು ಟಿಕೆಟ್ ಮಾರಾಟವೂ 'ಟೈ' ಆಗಲಿ ಎಂದು ಆಶಿಸಿದ್ದಾರೆ. ಮೊದಲು ಅರ್ಧದಷ್ಟು ಟಿಕೆಟ್ ಗಳನ್ನು ಅಭಿಮಾನಿ ದೇವರುಗಳಿಗೆ ಹಂಚಿಬಿಡಿ. ಮುಂದೆ ಯಾವುದೇ ತಾಪತ್ರಯ ಬಾರದಂತೆ ನಾನು ನೋಡಿಕೊಳ್ಳುವೆ ಎಂದೂ ಅವರು ಹೊಸದಾಗಿ ಕೆಎಸ್ ಸಿಎ ಸಾರಥ್ಯ ವಹಿಸಿರುವ ಜಾವಗಲ್ ಶ್ರೀನಾಥ್ ತಂಡಕ್ಕೆ ಅಭಯ ನೀಡಿದ್ದಾರೆ. ಸ್ಟೇಡಿಯಂನಲ್ಲಿ 38,000 ಮಂದಿ ಆರಾಮವಾಗಿ ಕುಳಿತುಕೊಳ್ಳಬಹುದು. ಸ್ವಲ್ಪ ಒತ್ತರಿಸಿಕೊಂಡು ಕುಳಿತರೆ 42,000 ಮಂದಿಗೂ ಅವಕಾಶ ಕಲ್ಪಿಸಬಹುದು ಎಂಬುದು ಲೋಕೋಪಯೋಗಿ ಇಲಾಖೆಯ ಲೋಕೋಪಯೋಗ ಮಾತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications