ಬೆಂಗಳೂರಿನಲ್ಲಿ ಮಾ. 10, 11 ಕಾವೇರಿ ನೀರು ಇಲ್ಲ

ಕೇಂದ್ರ, ಪೂರ್ವ ಮತ್ತು ಉತ್ತರ ಭಾಗಗಳಲ್ಲಿನ ಪ್ರದೇಶಗಳಿಗೆ ಎರಡು ದಿನಗಳ ಕಾಲ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ. ಅಲ್ಲದೆ ನಗರದ ಉಳಿದ ಪ್ರದೇಶಗಳಲ್ಲೂ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ನಿತ್ಯ ಕಾವೇರಿ ನದಿಯಿಂದ 500 ದಶಲಕ್ಷ ಲೀಟರ್ ನೀರು ತರುವ ಸಲುವಾಗಿ ಕೊಳವೆಗಳನ್ನು ಅಳವಡಿಸಲಾಗುತ್ತಿದೆ.
ತೊರೆಕಾಡನಹಳ್ಳಿಯಲ್ಲಿ 48 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯದ ಜಲಾಗಾರ ನಿರ್ಮಿಸಲಾಗುತ್ತಿದ್ದು, ಇದೇ ಜಾಗದಲ್ಲಿ ಕಾವೇರಿ 2 ಮತ್ತು 3ನೇ ಹಂತದ ಕೊಳವೆ ಮಾರ್ಗಗಳು ಹಾದುಹೋಗಿವೆ. ಹೀಗಾಗಿ, ಈ ಕೊಳವೆ ಮಾರ್ಗಗಳನ್ನು ಬೇರೆಗೆಡೆಗೆ ವರ್ಗಾಯಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, 2 ಮತ್ತು 3ನೇ ಹಂತದ ನೀರಿನ ಪಂಪ್-ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಂಡಳಿ ಹೇಳಿದೆ.












Click it and Unblock the Notifications