Get Updates
Get notified of breaking news, exclusive insights, and must-see stories!

ಕುಮಾರಣ್ಣ ಶ್ರೀರಾಮುಲು ರಹಸ್ಯ ಭೇಟಿ

HD Kumaraswamy secret meet with Sri ramulu
ಬೆಂಗಳೂರು, ಮಾ 10 : ವಿಶ್ವ ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ರಾಜಕೀಯ ಮರೆತು ಕನ್ನಡತನ ಮೆರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿದ್ಧರಾಗಿದ್ದರು. ಆದರೆ, ದೆಹಲಿ ಕೂತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿಡಿಸಿದ ಬಾಂಬ್ ತಡವಾಗಿ ಸ್ಫೋಟಗೊಳ್ಳುತ್ತಿದೆ. ದೆಹಲಿಗೆ ದೌಡಾಯಿಸಿರುವ ಯಡಿಯೂರಪ್ಪ, ಪಕ್ಷದ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ನಡುವೆ ಕೆಲದಿನಗಳ ಹಿಂದೆ ಕುಮಾರಸ್ವಾಮಿ ಹಾಗೂ ಶ್ರೀರಾಮುಲು ಅವರನ್ನು ರಹಸ್ಯವಾಗಿ ಭೇಟಿ ಮಾಡಿದ ವರದಿಗಳು ಬಂದಿವೆ.

ನಗರದ ರಿಸಾರ್ಟ್ ವೊಂದರಲ್ಲಿ ಜೆಡಿಎಸ್ ರಾಜ್ಯಾದ್ಯಕ್ಷ ಕುಮಾರಸ್ವಾಮಿ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಆಪರೇಷನ್ ಕಮಲಕ್ಕೆ ಪ್ರತಿತಂತ್ರ ರೂಪಿಸಲು ಕುಮಾರಸ್ವಾಮಿ ನಡೆಸುತ್ತಿರುವ ಮೊದಲ ಹೆಜ್ಜೆ ಇದಾಗಿದೆ. ಕೊಪ್ಪಳ ಶಾಸಕ ಕರಡಿ ಸಂಗಣ್ಣವರನ್ನು ಪಕ್ಷಕ್ಕೆ ಸೇರಿಸಿ ಕೊಂಡಿರುವುದನ್ನು ಮೂಲ ಬಿಜೆಪಿ ನಾಯಕರುಗಳು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಬಿಜೆಪಿಯಲ್ಲಿ ಮತ್ತೊಮ್ಮೆ ಬಂಡಾಯದ ಬೆಂಕಿ ಹತ್ತಿಕೊಂಡರೆ ಅದರಲ್ಲಿ ಚಳಿ ಕಾಯಿಸಿಕೊಳ್ಳುವ ಉದ್ದೇಶ ಈ ನಾಯಕರಿಗಿದೆ ಎಂಬ ಗುಲ್ಲೆದ್ದಿದೆ.

ಗಣಿಧಣಿಗಳ ವಿರುದ್ದ ಸರ್ವೋಚ್ಚ ನ್ಯಾಯಾಲಯ ಸ್ವಯಂ ಪ್ರೇರಿತ ತನಿಖೆ ನಡೆಸುತ್ತಿರುವುದು ಮತ್ತು ಸಿಬಿಐ ದಾಳಿಗೆ ಸಿಎಂ ಪರೋಕ್ಷ ಸಹಕಾರ ನೀಡಿರುವುದು ರೆಡ್ಡಿ ಸಹೋದರರಿಗೆ ಕಗ್ಗಂಟಾಗಿ ಪರಿಣಮಿಸಿದ್ದು ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಲು ಕುಮಾರಸ್ವಾಮಿ ಮೊರೆ ಹೊಕ್ಕಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಬಿಜೆಪಿಯ 16 ಶಾಸಕರು ಮತ್ತು ಪಕ್ಷೇತರ ಶಾಸಕರು ಬಂಡಾಯ ಎದ್ದ ಸಂದರ್ಭದಲ್ಲಿ ಕೂಡಾ ಈ ಇಬ್ಬರು ನಾಯಕರುಗಳು ಗುಪ್ತ ಮಾತುಕತೆ ನಡೆಸಿದ್ದರು. ಕೆಲವು ದಿನಗಳ ಹಿಂದೆ ಕುಮಾರಸ್ವಾಮಿ ತಮ್ಮ ಪಕ್ಷದ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಸೆಳೆಯಲು ಪ್ರಯತ್ನ ಪಟ್ಟರೆ ಬಿಜೆಪಿ ಶಾಸಕರ ಸಂಖ್ಯೆಯನ್ನು 106 ರಿಂದ 96ಕ್ಕೆ ಇಳಿಸ ಬೇಕಾಗುತ್ತದೆ ಎಂದು ಎಚ್ಡಿಕೆ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸ ಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+