ಕುಮಾರಣ್ಣ ಶ್ರೀರಾಮುಲು ರಹಸ್ಯ ಭೇಟಿ

ನಗರದ ರಿಸಾರ್ಟ್ ವೊಂದರಲ್ಲಿ ಜೆಡಿಎಸ್ ರಾಜ್ಯಾದ್ಯಕ್ಷ ಕುಮಾರಸ್ವಾಮಿ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಆಪರೇಷನ್ ಕಮಲಕ್ಕೆ ಪ್ರತಿತಂತ್ರ ರೂಪಿಸಲು ಕುಮಾರಸ್ವಾಮಿ ನಡೆಸುತ್ತಿರುವ ಮೊದಲ ಹೆಜ್ಜೆ ಇದಾಗಿದೆ. ಕೊಪ್ಪಳ ಶಾಸಕ ಕರಡಿ ಸಂಗಣ್ಣವರನ್ನು ಪಕ್ಷಕ್ಕೆ ಸೇರಿಸಿ ಕೊಂಡಿರುವುದನ್ನು ಮೂಲ ಬಿಜೆಪಿ ನಾಯಕರುಗಳು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಬಿಜೆಪಿಯಲ್ಲಿ ಮತ್ತೊಮ್ಮೆ ಬಂಡಾಯದ ಬೆಂಕಿ ಹತ್ತಿಕೊಂಡರೆ ಅದರಲ್ಲಿ ಚಳಿ ಕಾಯಿಸಿಕೊಳ್ಳುವ ಉದ್ದೇಶ ಈ ನಾಯಕರಿಗಿದೆ ಎಂಬ ಗುಲ್ಲೆದ್ದಿದೆ.
ಗಣಿಧಣಿಗಳ ವಿರುದ್ದ ಸರ್ವೋಚ್ಚ ನ್ಯಾಯಾಲಯ ಸ್ವಯಂ ಪ್ರೇರಿತ ತನಿಖೆ ನಡೆಸುತ್ತಿರುವುದು ಮತ್ತು ಸಿಬಿಐ ದಾಳಿಗೆ ಸಿಎಂ ಪರೋಕ್ಷ ಸಹಕಾರ ನೀಡಿರುವುದು ರೆಡ್ಡಿ ಸಹೋದರರಿಗೆ ಕಗ್ಗಂಟಾಗಿ ಪರಿಣಮಿಸಿದ್ದು ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಲು ಕುಮಾರಸ್ವಾಮಿ ಮೊರೆ ಹೊಕ್ಕಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಬಿಜೆಪಿಯ 16 ಶಾಸಕರು ಮತ್ತು ಪಕ್ಷೇತರ ಶಾಸಕರು ಬಂಡಾಯ ಎದ್ದ ಸಂದರ್ಭದಲ್ಲಿ ಕೂಡಾ ಈ ಇಬ್ಬರು ನಾಯಕರುಗಳು ಗುಪ್ತ ಮಾತುಕತೆ ನಡೆಸಿದ್ದರು. ಕೆಲವು ದಿನಗಳ ಹಿಂದೆ ಕುಮಾರಸ್ವಾಮಿ ತಮ್ಮ ಪಕ್ಷದ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಸೆಳೆಯಲು ಪ್ರಯತ್ನ ಪಟ್ಟರೆ ಬಿಜೆಪಿ ಶಾಸಕರ ಸಂಖ್ಯೆಯನ್ನು 106 ರಿಂದ 96ಕ್ಕೆ ಇಳಿಸ ಬೇಕಾಗುತ್ತದೆ ಎಂದು ಎಚ್ಡಿಕೆ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸ ಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications