ಜಪಾನ್ ಭೂಕಂಪ: ವ್ಯಾಪಕ ಸುನಾಮಿ ಭೀತಿ

ಈ ಮಧ್ಯೆ, ಜಪಾನಿನಲ್ಲಿ ಅಣುಶಕ್ತಿ ತುರ್ತು ಪರಿಸ್ಥಿತಿಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಒಂದು ಸ್ಥಾವರಕ್ಕೆ ಬೆಂಕಿ ಬಿದ್ದಿದೆ. ನಾಲ್ಕು ಸ್ಥಾವರಗಳನ್ನು ಮುನ್ನೆಚ್ಚರಿಕೆಯಾಗಿ ಸ್ಥಗಿತಗೊಳಿಸಲಾಗಿದೆ. ಒನಗಾವಾ ಅಣುಶಕ್ತಿ ಉತ್ಪಾದನಾ ಕೇಂದ್ರದ 11 ಸ್ಥಾವರಗಳನ್ನು ಸ್ವಯಂನಿಯಂತ್ರಣದಲ್ಲಿ ಮುಚ್ಚಲಾಗಿದೆ.
ಇದರ ಜತೆಗೆ ರಷ್ಯಾ, ತೈವಾನ್, ಫಿಲಪ್ಪೀನ್ಸ್, ಇಂಡೋನೇಷ್ಯಾ, ಪಪುವಾ ನ್ಯೂ ಗಿನಿ, ಫಿಜಿ, ಮೆಕ್ಸಿಕೊ, ಗ್ವಾಟೆಮಾಲ, ಎಲ್ ಸಾಲ್ವಡಾರ್, ಕೋಸ್ಟರಿಕಾ, ನಿಕರಾಗುವಾ, ಪನಾಮಾ, ಹೋಂಡುರಾಸ್, ಚಿಲಿ, ಈಕ್ವಡಾರ್, ಕೊಲಂಬಿಯಾ, ಪೆರು ಸಹ ಸುನಾಮಿಗೆ ತುತ್ತಾಗುವ ಅಪಾಯಿವಿದೆ ಎಂದು ಎಚ್ಚರಿಸಲಾಗಿದೆ. ಟೋಕಿಯೋದಲ್ಲಿನ ಎರಡೂ ಬೃಹತ್ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ.
ವಿಡಿಯೋಗಳು: ಸುನಾಮಿ ಅಲೆಗಳ ರೌದ್ರ ನರ್ತನ ಚಿತ್ರಗಳು | ಸುನಾಮಿ ಅಲೆಗಳ ದಾಳಿಗೆ ಕುಬ್ಜವಾದ ಜಪಾನ್
ಶುಕ್ರವಾರ ಜಪಾನಿನಲ್ಲಿ ಈ ಹಿಂದೆ 140 ವರ್ಷಗಳಲ್ಲಿ ಎಂದೂ ಕಂಡು ಕೇಳರಿಯದ ಭೀಕರ ಭೂಕಂಪ, ಸುನಾಮಿ ರುದ್ರನರ್ತನ ಮಾಡತೊಡಗಿದೆ. 10 ಮೀಟರ್ ಎತ್ತರದ ದೈತ್ಯ ಅಲೆಗಳು ಇದುವರೆಗೆ ತಿಳಿದುಬಂದ ಮಾಹಿತಿಯಂತೆ 50 ಮಂದಿಯನ್ನು ಆಹುತಿ ತೆಗೆದುಕೊಂಡಿದೆ. ಸಾವು ನೋವಿನ ಸಂಖ್ಯೆ ಇನ್ನೂ ಅಧಿಕವಾಗುವ ಲಕ್ಷಣಗಳಿವೆ.
2004ರಲ್ಲಿ ಸುಮಾರು 2 ಲಕ್ಷ ಜನರನ್ನು ಆಹುತಿ ತೆಗೆದುಕೊಂಡಿದ್ದ ಇಂಡೋನೇಷ್ಯಾ ಸುನಾಮಿ ಸ್ಥಳೀಯ ಕಾಲಮಾನದ ಪ್ರಕಾರ ಇಂದು (ಮಾರ್ಚ್11) ನಡು ರಾತ್ರಿ ಮತ್ತೆ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹವಾಯಿ ದ್ವೀಪಗಳಲ್ಲಿ ಮಾರ್ಚ್ 12ರ ಬೆಳಗಿನ ಜಾವ 3 ಗಂಟೆಗೆ ಮೊದಲ ಸುನಾಮಿ ಅಲೆ ಅಪ್ಪಳಿಸುವ ಬೆದರಿಕೆ ಇದೆ. ಉತ್ತರ ಫಿಲಿಪ್ಪೀನ್ಸ್ ನ ಮೂರು ಪ್ರಾಂತ್ಯಗಳಲ್ಲಿ ಜನರನ್ನು ಎತ್ತರದ ಪ್ರದೇಶಗಳಿಗೆ ಕೊಂಡೊಯ್ಯಲಾಗುತ್ತಿದೆ. ಎಚ್ಚರಿಕೆಯ ಸಂದೇಶಗಳನ್ನು ಯಾರೂ ಕಡೆಗಣಿಸುವ ಸ್ಥಿತಿಯಲ್ಲಿ ಇಲ್ಲ. ಪರಿಸ್ಥತಿ ಅಷ್ಟೊಂದು ನಿಗೂಢವಾಗಿ, ಗಂಭೀರವಾಗಿದೆ. ಅನೇಕ ಪಟ್ಟ ಪುಟ್ಟ ದ್ವೀಪಗಳು ಬೆಳಗಾಗುವುದರೊಳಗಾಗಿ ಕೊಚ್ಚಿ ಹೋಗುವ ಸಾಧ್ಯತೆ ಇದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications