ಮಾ.14 ರಿಂದ ಸರ್ಕಾರಿ ವೈದ್ಯರ ಮುಷ್ಕರ

ಗುತ್ತಿಗೆ ಆಧಾರದ ಮೇಲೆ ಮಾಡಿದ ಸೇವೆಯನ್ನು ಸರ್ಕಾರ ಪರಿಗಣಿಸುತ್ತಿಲ್ಲ. ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ನಮ್ಮ ಸೇವೆ ಪರಿಗಣಿಸಲಾಗುತ್ತಿತ್ತು. ಆದರೆ, ಈಗ ಏಕಾಏಕಿ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಸರ್ಕಾರಿ ವೈದ್ಯಾದಿಕಾರಿ ಸಂಘದ ಅಧ್ಯಕ್ಷ ಡಾ. ಹೆಚ್.ಎನ್. ರವೀಂದ್ರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಮುಖ್ಯ ಕಾರ್ಯದರ್ಶಿಯವರು ನೀಡಿರುವ ಆದೇಶವನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಯವರು ರದ್ದುಗೊಳಿಸಿದ್ದಾರೆ. ಅಲ್ಲದೆ ನಮಗೆ ಈ ಹಿಂದೆ ನೀಡಿದ್ದ ಬಹುತೇಕ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿರುವುದರಿಂದ ಅನಿವಾರ್ಯವಾಗಿ ಬೀದಿಗಿಳಿಯಬೇಕಾಗಿದೆ ಎಂದು ರವೀಂದ್ರ ಹೇಳಿದರು.
ಮುಂದಿನ ಶೈಕ್ಷಣಿಕ ಉದ್ದೇಶ ಹಾಗೂ ಗ್ರಾಮೀಣ ಜನರ ಸೇವೆ ಸಲ್ಲಿಸುವ ದೃಷ್ಟಿಯಿಂದ ಸಂಪರ್ಕ ಸಾಧ್ಯವಿಲ್ಲದ ಗ್ರಾಮಗಳಲ್ಲೂ ಸೇವೆ ಮಾಡುತ್ತೇವೆ. ಗ್ರಾಮೀಣ ಜನರ ಸೇವೆ ಸಲ್ಲಿಸಿದರೂ ನಮ್ಮನ್ನು ಸರ್ಕಾರ ಗುರುತಿಸುತ್ತಿಲ್ಲ ಎಂದು ವೈದ್ಯರು ಆರೋಪಿಸಿದ್ದಾರೆ. ಜನರನ್ನು ಕಷ್ಟಕ್ಕೆ ದೂಡಬೇಕು ಎಂದು ಯಾರು ಬಯಸುವುದಿಲ್ಲ. ಆದರೆ, ನಮ್ಮ ಸೇವೆಗೆ ತಕ್ಕ ಬೆಲೆ ಸಿಗದಿದ್ದಾಗ, ಬೇಡಿಕೆಗಳಿಗೆ ಸರ್ಕಾರ ಕಿವಿಗೊಡದಿದ್ದಾಗ ಹೋರಾಟವೇ ಅಂತಿಮ ಮಾರ್ಗ ಎಂದು ರವೀಂದ್ರ ತಿಳಿಸಿದರು.












Click it and Unblock the Notifications