ಹಳದಿ ಟಿವಿಗಳ ವಿರುದ್ಧ ಕೆಂಪಗಾದ ಯಡ್ಡಿ

ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಪತ್ರಿಕಾರಂಗ ಜವಾಬ್ದಾರಿಯಿಂದ ಮತ್ತು ಸಂವೇದನೆಯಿಂದ ವರ್ತಿಸಬೇಕು. ವರದಿಗಳನ್ನು ಖಚಿತ ಪಡಿಸಿಕೊಂಡು ಅತ್ಯಂತ ಜವಾಬ್ದಾರಿಯಿಂದ ಪ್ರಕಟಿಸಬೇಕು ಮತ್ತು ಗಾಳಿಪಟ ಹಾರಿಸಬಾರದು. ಟಿವಿ ಚಾನಲ್ಲುಗಳು ಟಿಆರ್ಪಿ ಹೆಚ್ಚಿಸಿಕೊಳ್ಳುವುದ್ದಕ್ಕೋಸ್ಕರ ಸತ್ಯಕ್ಕೆ ದೂರವಾದ ವರದಿಗಳನ್ನು ಪ್ರಕಟಿಸಬಾರದು ಎಂದು ಅವರು ಕಿವಿಮಾತು ಹೇಳಿದರು.
ಮಣಿಪಾಲ್ ಮೀಡಿಯಾ ನೆಟ್ವರ್ಕ್ ಸಂಸ್ಥೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು ಟಿವಿ ಚಾನಲ್ಲುಗಳನ್ನು ಗುರಿಯಾಗಿಟ್ಟುಕೊಂಡು ತಮ್ಮ ವಾಗ್ದಾಳಿಯನ್ನು ಮುಂದುವರಿಸಿದರು. ಕೆಲ ಟಿವಿ ಚಾನಲ್ಲುಗಳು ಪ್ರಕಟಿಸುವ ಹೆಚ್ಚಿನ ವರದಿಗಳು ಸ್ವಹಿತಾಸಕ್ತಿಯಿಂದ ಕೂಡಿರುತ್ತವೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ವಾಕ್ ಸ್ವಾತಂತ್ರ್ಯವನ್ನು ಗೌರವಿಸುವ ಸರಕಾರ ಮತ್ತು ಪತ್ರಿಕೋದ್ಯಮದ ನಡುವಿನ ಸಂಬಂಧ ಆರೋಗ್ಯಕರವಾಗಿರಬೇಕು ಮತ್ತು ರಚನಾತ್ಮಕವಾಗಿರಬೇಕು ಎಂದು ಅವರು ಪ್ರತಿಪಾದಿಸಿದರು. ಪತ್ರಿಕೋದ್ಯಮದ ಅಭಿವೃದ್ಧಿ ಮತ್ತು ಒಳಿತಿಗಾಗಿ ತಮ್ಮ ಸರಕಾರ ಅನೇಕ ಸವಲತ್ತುಗಳನ್ನು ನೀಡಿದೆ. ಟಿವಿ ಚಾನಲ್ಲುಗಳು ಕೂಡ ತಮ್ಮ ಸರಕಾರದ ಚಿಂತನೆಗೆ ಅನುಗುಣವಾಗಿ ಸ್ಪಂದಿಸುತ್ತಾರೆಂಬ ನಿರೀಕ್ಷೆ ತಮಗಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಈ ನಿಟ್ಟಿನಲ್ಲಿ ತಮ್ಮ ಸರಕಾರ ಒಂದು ಸಮಿತಿಯನ್ನು ರಚಿಸಿರುವುದಾಗಿ, ಆ ಸಮಿತಿ ಪತ್ರಕರ್ತರ ಯೋಗಕ್ಷೇಮವನ್ನು ಕಾಪಾಡುವ ಉದ್ದೇಶದಿಂದ ಚಿಂತನೆಯನ್ನು ನಡೆಸಿದೆ ಎಂದು ಯಡಿಯೂರಪ್ಪ ಹೇಳಿದರು. ತಮ್ಮ ನಿಲುವು ಈ ರೀತಿ ಇದ್ದಾಗ್ಯೂ ಕೆಲವು ಟಿವಿ ವಾಹಿನಿಗಳು ಗೊಂದಲ ಉಂಟು ಮಾಡುವಂಥ ವರದಿಗಳನ್ನು ಪುಂಖಾನುಪುಂಖವಾಗಿ ಪ್ರಕಟಿಸುತ್ತಿರುವ ಬಗ್ಗೆ ಅವರು ಖಿನ್ನತೆ ವ್ಯಕ್ತಪಡಿಸಿದರು.
ಸಮಾರೋಪ : ಹುಬ್ಬಳ್ಳಿಯ ಕಾರ್ಯಕ್ರಮದ ನಂತರ ಬೆಳಗಾವಿಯ ವಿಶ್ವ ಕನ್ನಡ ಸಮ್ಮೇಳನದ ತಾಣಕ್ಕೆ ಯಡಿಯೂರಪ್ಪ ಸಂಜೆ ಆಗಮಿಸಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿಶ್ವ ಕನ್ನಡ ಸಮ್ಮೇಳನವನ್ನು ಐದು ವರ್ಷಗಳಿಗೊಮ್ಮೆ ನಡೆಸುವ ಆಶಯ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮಾದರಿಯ ಒಂದು ಸುಸಜ್ಜಿತ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣವನ್ನು ನಿರ್ಮಾಣ ಮಾಡಬೇಕೆಂದು ಚಿಂತನೆಯನ್ನು ತೇಲಿಬಿಟ್ಟರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications