ಹಳದಿ ಟಿವಿಗಳ ವಿರುದ್ಧ ಕೆಂಪಗಾದ ಯಡ್ಡಿ

ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಪತ್ರಿಕಾರಂಗ ಜವಾಬ್ದಾರಿಯಿಂದ ಮತ್ತು ಸಂವೇದನೆಯಿಂದ ವರ್ತಿಸಬೇಕು. ವರದಿಗಳನ್ನು ಖಚಿತ ಪಡಿಸಿಕೊಂಡು ಅತ್ಯಂತ ಜವಾಬ್ದಾರಿಯಿಂದ ಪ್ರಕಟಿಸಬೇಕು ಮತ್ತು ಗಾಳಿಪಟ ಹಾರಿಸಬಾರದು. ಟಿವಿ ಚಾನಲ್ಲುಗಳು ಟಿಆರ್ಪಿ ಹೆಚ್ಚಿಸಿಕೊಳ್ಳುವುದ್ದಕ್ಕೋಸ್ಕರ ಸತ್ಯಕ್ಕೆ ದೂರವಾದ ವರದಿಗಳನ್ನು ಪ್ರಕಟಿಸಬಾರದು ಎಂದು ಅವರು ಕಿವಿಮಾತು ಹೇಳಿದರು.
ಮಣಿಪಾಲ್ ಮೀಡಿಯಾ ನೆಟ್ವರ್ಕ್ ಸಂಸ್ಥೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು ಟಿವಿ ಚಾನಲ್ಲುಗಳನ್ನು ಗುರಿಯಾಗಿಟ್ಟುಕೊಂಡು ತಮ್ಮ ವಾಗ್ದಾಳಿಯನ್ನು ಮುಂದುವರಿಸಿದರು. ಕೆಲ ಟಿವಿ ಚಾನಲ್ಲುಗಳು ಪ್ರಕಟಿಸುವ ಹೆಚ್ಚಿನ ವರದಿಗಳು ಸ್ವಹಿತಾಸಕ್ತಿಯಿಂದ ಕೂಡಿರುತ್ತವೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ವಾಕ್ ಸ್ವಾತಂತ್ರ್ಯವನ್ನು ಗೌರವಿಸುವ ಸರಕಾರ ಮತ್ತು ಪತ್ರಿಕೋದ್ಯಮದ ನಡುವಿನ ಸಂಬಂಧ ಆರೋಗ್ಯಕರವಾಗಿರಬೇಕು ಮತ್ತು ರಚನಾತ್ಮಕವಾಗಿರಬೇಕು ಎಂದು ಅವರು ಪ್ರತಿಪಾದಿಸಿದರು. ಪತ್ರಿಕೋದ್ಯಮದ ಅಭಿವೃದ್ಧಿ ಮತ್ತು ಒಳಿತಿಗಾಗಿ ತಮ್ಮ ಸರಕಾರ ಅನೇಕ ಸವಲತ್ತುಗಳನ್ನು ನೀಡಿದೆ. ಟಿವಿ ಚಾನಲ್ಲುಗಳು ಕೂಡ ತಮ್ಮ ಸರಕಾರದ ಚಿಂತನೆಗೆ ಅನುಗುಣವಾಗಿ ಸ್ಪಂದಿಸುತ್ತಾರೆಂಬ ನಿರೀಕ್ಷೆ ತಮಗಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಈ ನಿಟ್ಟಿನಲ್ಲಿ ತಮ್ಮ ಸರಕಾರ ಒಂದು ಸಮಿತಿಯನ್ನು ರಚಿಸಿರುವುದಾಗಿ, ಆ ಸಮಿತಿ ಪತ್ರಕರ್ತರ ಯೋಗಕ್ಷೇಮವನ್ನು ಕಾಪಾಡುವ ಉದ್ದೇಶದಿಂದ ಚಿಂತನೆಯನ್ನು ನಡೆಸಿದೆ ಎಂದು ಯಡಿಯೂರಪ್ಪ ಹೇಳಿದರು. ತಮ್ಮ ನಿಲುವು ಈ ರೀತಿ ಇದ್ದಾಗ್ಯೂ ಕೆಲವು ಟಿವಿ ವಾಹಿನಿಗಳು ಗೊಂದಲ ಉಂಟು ಮಾಡುವಂಥ ವರದಿಗಳನ್ನು ಪುಂಖಾನುಪುಂಖವಾಗಿ ಪ್ರಕಟಿಸುತ್ತಿರುವ ಬಗ್ಗೆ ಅವರು ಖಿನ್ನತೆ ವ್ಯಕ್ತಪಡಿಸಿದರು.
ಸಮಾರೋಪ : ಹುಬ್ಬಳ್ಳಿಯ ಕಾರ್ಯಕ್ರಮದ ನಂತರ ಬೆಳಗಾವಿಯ ವಿಶ್ವ ಕನ್ನಡ ಸಮ್ಮೇಳನದ ತಾಣಕ್ಕೆ ಯಡಿಯೂರಪ್ಪ ಸಂಜೆ ಆಗಮಿಸಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿಶ್ವ ಕನ್ನಡ ಸಮ್ಮೇಳನವನ್ನು ಐದು ವರ್ಷಗಳಿಗೊಮ್ಮೆ ನಡೆಸುವ ಆಶಯ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮಾದರಿಯ ಒಂದು ಸುಸಜ್ಜಿತ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣವನ್ನು ನಿರ್ಮಾಣ ಮಾಡಬೇಕೆಂದು ಚಿಂತನೆಯನ್ನು ತೇಲಿಬಿಟ್ಟರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications