ಜಾತಿಯ ಆಧಾರದ ಮೇಲೆ ಬಡವರ ಲೆಕ್ಕ ಸಾಧ್ಯವಿಲ್ಲ: ಗೌಡ
ಸ್ವಾತಂತ್ರ ಬಂದು 60 ವರ್ಷಗಳಾದರೂ ದೇಶದ ಎಲ್ಲ ವರ್ಗಗಳಲ್ಲಿ ಬಡತನವಿದೆ. ಬಡತನದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳವ ಹಂತಕ್ಕೆ ಬಂದಿದ್ದಾರೆ. ಆದರೆ, ಸರ್ಕಾರ ರೈತರ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಸಮಾಜದ ಎಲ್ಲ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸರಕಾರ ಶ್ರಮಿಸಬೇಕು ಎಂದು ದೇವೇಗೌಡ ಆಗ್ರಹಿಸಿದರು.
ಸರ್ಕಾರ ಹಗರಣಗಳನ್ನು ಬಿಚ್ಚಿಡಲು ಕುಮಾರಸ್ವಾಮಿ ಸಮರ್ಥರಿದ್ದಾರೆ. ಬಿಜೆಪಿ ಸರ್ಕಾರದ ಅಕ್ರಮಗಳ ಸರಮಾಲೆಯನ್ನು ರಾಜ್ಯದ ಜನತೆಗೆ ತೋರಿಸಬೇಕಿದೆ. ಕುಮಾರಸ್ವಾಮಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ತಮ್ಮ ಆಸೆಯನ್ನು ತೋಡಿಕೊಂಡರು.
ಅಪರೇಷನ್ ಕಮಲ ಮೂಲಕ ಸರ್ಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದೊಡನೆ ನೇರ ಹೋರಾಟಕ್ಕೆ ಇಳಿಯುವ ಕಾಲ ಬಂದಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ಒತ್ತಾಯ ಬಂದಿದೆ. ಆದರೆ, ಈ ಬಗ್ಗೆ ಇನ್ನೊಂದು ವಾರದಲ್ಲಿ ತೀರ್ಮಾನ ಪ್ರಕಟಿಸುವೆ. ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಇಳಿಸಲಿದೆ. ಬಿಜೆಪಿಗೆ ಹಣ ಬಲವಿದ್ದರೆ, ನಮಗೆ ಜನಬಲವಿದೆ ಎಂದರು.